ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರಿಗೆ ಸಚಿವರ ಭರವಸೆ; ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದ ಮುಷ್ಕರ ವಾಪಸ್

Published 11 ಸೆಪ್ಟೆಂಬರ್ 2023, 10:17 IST
Last Updated 11 ಸೆಪ್ಟೆಂಬರ್ 2023, 10:17 IST
ಅಕ್ಷರ ಗಾತ್ರ

ಬೆಂಗಳೂರು: ಆರ್ಥಿಕ ಇಲಾಖೆಗೆ ಸಂಬಂಧಿಸಿದ ಬೇಡಿಕೆಗಳನ್ನು ಹೊರತುಪಡಿಸಿ ಉಳಿದವುಗಳನ್ನು ಈಡೇರಿಸುವ ಭರವಸೆಯನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೀಡಿದ ಕಾರಣ ರಾಜ್ಯ ಸಾರಿಗೆ ಒಕ್ಕೂಟವು ಮುಷ್ಕರವನ್ನು ಸೋಮವಾರ ಮಧ್ಯಾಹ್ನ ಹಿಂಪಡೆದುಕೊಂಡಿದೆ. 

‘ಶಕ್ತಿ’ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸಬೇಕು ಅಥವಾ ರಸ್ತೆ ತೆರಿಗೆ ರದ್ದು ಮಾಡಬೇಕು. ರ‍್ಯಾಪಿಡೊ ಬೈಕ್‌ ಟ್ಯಾಕ್ಸಿ ನಿಷೇಧಿಸಬೇಕು ಸೇರಿದಂತೆ 30 ಬೇಡಿಕೆಗಳನ್ನು ಈಡೇರಿಸಬೇಕು ಎಂಬುದು ಒಕ್ಕೂಟದ ಆಗ್ರಹವಾಗಿತ್ತು. ಭಾನುವಾರ ರಾತ್ರಿ 12ರಿಂದ ಸೋಮವಾರ ರಾತ್ರಿ 12ರವರೆಗೆ ಮುಷ್ಕರ ನಡೆಸಲು ಖಾಸಗಿ ಬಸ್‌, ಆಟೊ, ಟ್ಯಾಕ್ಸಿ, ಶಾಲಾ ವಾಹನ ಸಹಿತ 32 ಸಂಘಟನೆಗಳ ಒಕ್ಕೂಟ ಕರೆ ನೀಡಿತ್ತು.

ಸ್ವಾತಂತ್ರ್ಯ ಉದ್ಯಾನಕ್ಕೆ ಭೇಟಿ ನೀಡಿದ ಸಚಿವರು, ‘ನಾನು ನಿಮ್ಮ ಪರ ಇದ್ದೇನೆ. ನನ್ನನ್ನೂ ನಿಮ್ಮ ಜೊತೆಗೆ ಸೇರಿಸಿಕೊಳ್ಳಿ. ತೆರಿಗೆ ಮತ್ತು ಶಕ್ತಿ ಯೋಜನೆಗೆ ಸಂಬಂಧಿಸಿದ ಬೇಡಿಕೆಯನ್ನು ಈಡೇರಿಸುವುದು ನನ್ನ ವ್ಯಾಪ್ತಿಯಲ್ಲಿ ಕಷ್ಟ. ಉಳಿದ ಬೇಡಿಕೆಗಳನ್ನು ಈಡೇರಿಸುತ್ತೇನೆ’ ಎಂದು ಭರವಸೆ ನೀಡಿದರು.

ಆರ್ಥಿಕ ಇಲಾಖೆಗೆ ಸಂಬಂಧಿಸಿದ ಮೂರು ಬೇಡಿಕೆಗಳನ್ನು ಹೊರತುಪಡಿಸಿ ಉಳಿದ 27 ಬೇಡಿಕೆಗಳನ್ನು ಈಡೇರಿಸಲು ಮಂಗಳವಾರವೇ ಕ್ರಮ ಕೈಗೊಳ್ಳಬೇಕು ಎಂಬ ಷರತ್ತು ವಿಧಿಸಿ ಮುಷ್ಕರ ಹಿಂಪಡೆಯಲಾಯಿತು ಎಂದು ಒಕ್ಕೂಟದ ಅಧ್ಯಕ್ಷ ಎಸ್‌. ನಟರಾಜ್‌ ಶರ್ಮ ತಿಳಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT