<p><strong>ಬೆಂಗಳೂರು:</strong> ಬಿಜೆಪಿ ನಾಯಕರು ತಮ್ಮ ಮಕ್ಕಳಿಗೆ ಕೇಸರಿ ಶಾಲು ಹೊದಿಸಿ ಗೊರಕ್ಷಣೆಗೆ, ಧರ್ಮ ರಕ್ಷಣೆಗೆ ಕಳಿಸುತ್ತಾರಾ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.</p>.ದೇಶದ ಹಿತಕ್ಕಿಂತ ಮೋದಿಯವರಿಗೆ ಕ್ರಿಕೆಟ್ ದೊಡ್ಡದಾಯಿತೇ: ಪ್ರಿಯಾಂಕ್ ಖರ್ಗೆ.<p>‘ತಲೆ ತೆಗೆಯಿರಿ, ತೊಡೆ ಮುರಿಯಿರಿ ಎನ್ನುತ್ತಿರುವ ಬಿಜೆಪಿ ನಾಯಕರು ತಮ್ಮ ಮಕ್ಕಳ ಕೈಗೆ ದೊಣ್ಣೆ, ಲಾಂಗು ಮಚ್ಚುಗಳನ್ನು ಕೊಟ್ಟು ಬೀದಿಗೆ ಬಿಡುತ್ತಾರೆಯೇ’ ಎಂದು ಪ್ರಶ್ನಿಸಿದ್ದಾರೆ.</p><p>ಬಡವರ ಮನೆ ಮಕ್ಕಳನ್ನು ಬಾವಿಗೆ ತಳ್ಳಿ ರಾಜಕೀಯದ ಆಳ ನೋಡುವ ಬದಲು ತಮ್ಮ ಮಕ್ಕಳ ಹೆಗಲಿಗೆ ಕೇಸರಿ ಶಾಲು, ಕೈಗೆ ದೊಣ್ಣೆ ಮಚ್ಚು ಕೊಟ್ಟು ಧರ್ಮ ರಕ್ಷಣೆಯ ಕೈಂಕರ್ಯಕ್ಕೆ ಬಿಡಬೇಕು ಎಂದು ಹೇಳಿದ್ದಾರೆ.</p><p>ಬಿಜೆಪಿ ನಾಯಕರು ಧರ್ಮರಕ್ಷಣೆಯ ಬೋಧನೆ, ಪ್ರಚೋದನೆಗಳನ್ನು ತಮ್ಮ ಮನೆಯಿಂದಲೇ ಶುರು ಮಾಡಲಿ, ತಮ್ಮ ಮಕ್ಕಳಿಗೆ ತ್ರಿಶೂಲ ದೀಕ್ಷೆ ಕೊಡಲಿ, ಕೈಗೆ ದೊಣ್ಣೆ ಕೊಡಲಿ ಎಂದಿದ್ದಾರೆ.</p>.ಮೊದಲು ದ್ವಿರಾಷ್ಟ್ರ ಸಿದ್ಧಾಂತ ಪ್ರಚಾರ ಮಾಡಿದ್ದೇ ಸಾವರ್ಕರ್: ಪ್ರಿಯಾಂಕ್ ಖರ್ಗೆ.<p>ಹಿಂದೂಗಳು ಹೆಚ್ಚು ಮಕ್ಕಳನ್ನು ಹೆರಬೇಕು ಎಂಬ ಆರ್ಎಸ್ಎಸ್ ಫರ್ಮಾನು ಅನ್ನು ಯಾವ ಬಿಜೆಪಿಗರು ಪಾಲನೆ ಮಾಡಲು ಮುಂದಾಗಿದ್ದಾರೆ? ಮಕ್ಕಳು ಹೆರುವುದರ ಹೊರೆಯೂ ಬಡವರಿಗೆ ಮಾತ್ರವೇ? ಬಿಜೆಪಿಗರಿಗೂ ಅನ್ವಯಿಸುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.</p><p>ಅಮಾಯಕ ಹಿಂದೂ ಕಾರ್ಯಕರ್ತರು ಬಿಜೆಪಿ ನಾಯಕರೆದುರು ತಲೆ ತೆಗೆಯುವ ಕೆಲಸಕ್ಕೆ ನಿಮ್ಮ ಮಕ್ಕಳು ಮುಂದಿರಲಿ, ನಾವು ಅವರ ಹಿಂದೆ ಇರುತ್ತೇವೆ ಎಂಬ ಒಂದೇ ಒಂದು ಬೇಡಿಕೆ ಮುಂದಿಡಲಿ. ಆಗ ಬಿಜೆಪಿ ನಾಯಕರ ಅಸಲಿತ ಬಂಡವಾಳವನ್ನು ಕಾಣಬಹುದು ಎಂದು ಬರೆದುಕೊಂಡಿದ್ದಾರೆ.</p> .ಯೂರಿಯಾಕ್ಕಾಗಿ ಬಿಜೆಪಿಗರು ದೆಹಲಿಯಲ್ಲಿ ಪ್ರತಿಭಟಿಸಲಿ: ಪ್ರಿಯಾಂಕ್ ಖರ್ಗೆ ವ್ಯಂಗ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಜೆಪಿ ನಾಯಕರು ತಮ್ಮ ಮಕ್ಕಳಿಗೆ ಕೇಸರಿ ಶಾಲು ಹೊದಿಸಿ ಗೊರಕ್ಷಣೆಗೆ, ಧರ್ಮ ರಕ್ಷಣೆಗೆ ಕಳಿಸುತ್ತಾರಾ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.</p>.ದೇಶದ ಹಿತಕ್ಕಿಂತ ಮೋದಿಯವರಿಗೆ ಕ್ರಿಕೆಟ್ ದೊಡ್ಡದಾಯಿತೇ: ಪ್ರಿಯಾಂಕ್ ಖರ್ಗೆ.<p>‘ತಲೆ ತೆಗೆಯಿರಿ, ತೊಡೆ ಮುರಿಯಿರಿ ಎನ್ನುತ್ತಿರುವ ಬಿಜೆಪಿ ನಾಯಕರು ತಮ್ಮ ಮಕ್ಕಳ ಕೈಗೆ ದೊಣ್ಣೆ, ಲಾಂಗು ಮಚ್ಚುಗಳನ್ನು ಕೊಟ್ಟು ಬೀದಿಗೆ ಬಿಡುತ್ತಾರೆಯೇ’ ಎಂದು ಪ್ರಶ್ನಿಸಿದ್ದಾರೆ.</p><p>ಬಡವರ ಮನೆ ಮಕ್ಕಳನ್ನು ಬಾವಿಗೆ ತಳ್ಳಿ ರಾಜಕೀಯದ ಆಳ ನೋಡುವ ಬದಲು ತಮ್ಮ ಮಕ್ಕಳ ಹೆಗಲಿಗೆ ಕೇಸರಿ ಶಾಲು, ಕೈಗೆ ದೊಣ್ಣೆ ಮಚ್ಚು ಕೊಟ್ಟು ಧರ್ಮ ರಕ್ಷಣೆಯ ಕೈಂಕರ್ಯಕ್ಕೆ ಬಿಡಬೇಕು ಎಂದು ಹೇಳಿದ್ದಾರೆ.</p><p>ಬಿಜೆಪಿ ನಾಯಕರು ಧರ್ಮರಕ್ಷಣೆಯ ಬೋಧನೆ, ಪ್ರಚೋದನೆಗಳನ್ನು ತಮ್ಮ ಮನೆಯಿಂದಲೇ ಶುರು ಮಾಡಲಿ, ತಮ್ಮ ಮಕ್ಕಳಿಗೆ ತ್ರಿಶೂಲ ದೀಕ್ಷೆ ಕೊಡಲಿ, ಕೈಗೆ ದೊಣ್ಣೆ ಕೊಡಲಿ ಎಂದಿದ್ದಾರೆ.</p>.ಮೊದಲು ದ್ವಿರಾಷ್ಟ್ರ ಸಿದ್ಧಾಂತ ಪ್ರಚಾರ ಮಾಡಿದ್ದೇ ಸಾವರ್ಕರ್: ಪ್ರಿಯಾಂಕ್ ಖರ್ಗೆ.<p>ಹಿಂದೂಗಳು ಹೆಚ್ಚು ಮಕ್ಕಳನ್ನು ಹೆರಬೇಕು ಎಂಬ ಆರ್ಎಸ್ಎಸ್ ಫರ್ಮಾನು ಅನ್ನು ಯಾವ ಬಿಜೆಪಿಗರು ಪಾಲನೆ ಮಾಡಲು ಮುಂದಾಗಿದ್ದಾರೆ? ಮಕ್ಕಳು ಹೆರುವುದರ ಹೊರೆಯೂ ಬಡವರಿಗೆ ಮಾತ್ರವೇ? ಬಿಜೆಪಿಗರಿಗೂ ಅನ್ವಯಿಸುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.</p><p>ಅಮಾಯಕ ಹಿಂದೂ ಕಾರ್ಯಕರ್ತರು ಬಿಜೆಪಿ ನಾಯಕರೆದುರು ತಲೆ ತೆಗೆಯುವ ಕೆಲಸಕ್ಕೆ ನಿಮ್ಮ ಮಕ್ಕಳು ಮುಂದಿರಲಿ, ನಾವು ಅವರ ಹಿಂದೆ ಇರುತ್ತೇವೆ ಎಂಬ ಒಂದೇ ಒಂದು ಬೇಡಿಕೆ ಮುಂದಿಡಲಿ. ಆಗ ಬಿಜೆಪಿ ನಾಯಕರ ಅಸಲಿತ ಬಂಡವಾಳವನ್ನು ಕಾಣಬಹುದು ಎಂದು ಬರೆದುಕೊಂಡಿದ್ದಾರೆ.</p> .ಯೂರಿಯಾಕ್ಕಾಗಿ ಬಿಜೆಪಿಗರು ದೆಹಲಿಯಲ್ಲಿ ಪ್ರತಿಭಟಿಸಲಿ: ಪ್ರಿಯಾಂಕ್ ಖರ್ಗೆ ವ್ಯಂಗ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>