<p><strong>ಕಲಬುರಗಿ:</strong> ‘ಕಲಬುರಗಿ ಜಿಲ್ಲೆಯಲ್ಲಿ ಪ್ರಿಯಾಂಕ್ ಖರ್ಗೆ ಸರ್ವಾಧಿಕಾರಿಯಾಗಿ ಮೆರೆಯುತ್ತಿದ್ದಾರೆ. ಅವರ ಪಾಪದ ಕೊಡ ತುಂಬಿದೆ’ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಟೀಕಿಸಿದರು.</p><p> ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿರೋಧ ಪಕ್ಷದ ನಾಯಕ ಸ್ಥಾನ ಸಾಂವಿಧಾನಿಕ ಹುದ್ದೆ. ಅಂಥ ಸ್ಥಾನದಲ್ಲಿ ಛಲವಾದಿ ನಾರಾಯಣಸ್ವಾಮಿ ಅವರನ್ನು ಚಿತ್ತಾಪುರ ಅತಿಥಿಗೃಹದಲ್ಲಿ ಐದಾರು ಗಂಟೆ ದಿಗ್ಬಂಧನದಲ್ಲಿ ಇರಿಸಿದ್ದು ಖಂಡನೀಯ’ ಎಂದರು.</p><p>‘ದಿಗ್ಬಂಧನ ಖಂಡಿಸಿ ಹಾಗೂ ಮೂರು ಪ್ರಮುಖ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಶನಿವಾರ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ಬೆಳಿಗ್ಗೆ 10.30ಕ್ಕೆ ಧರಣಿ ಸತ್ಯಾಗ್ರಹ ಮಾಡುತ್ತೇವೆ’ ಎಂದು ರವಿಕುಮಾರ್ ಹೇಳಿದರು.</p><p>‘ಹೋರಾಟದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವ ಸಿ.ಟಿ.ರವಿ ಹಾಗೂ ಹತ್ತಾರು ಶಾಸಕರು, ಮುಖಂಡರು ಪಾಲ್ಗೊಳ್ಳುತ್ತಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ‘ಕಲಬುರಗಿ ಜಿಲ್ಲೆಯಲ್ಲಿ ಪ್ರಿಯಾಂಕ್ ಖರ್ಗೆ ಸರ್ವಾಧಿಕಾರಿಯಾಗಿ ಮೆರೆಯುತ್ತಿದ್ದಾರೆ. ಅವರ ಪಾಪದ ಕೊಡ ತುಂಬಿದೆ’ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಟೀಕಿಸಿದರು.</p><p> ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿರೋಧ ಪಕ್ಷದ ನಾಯಕ ಸ್ಥಾನ ಸಾಂವಿಧಾನಿಕ ಹುದ್ದೆ. ಅಂಥ ಸ್ಥಾನದಲ್ಲಿ ಛಲವಾದಿ ನಾರಾಯಣಸ್ವಾಮಿ ಅವರನ್ನು ಚಿತ್ತಾಪುರ ಅತಿಥಿಗೃಹದಲ್ಲಿ ಐದಾರು ಗಂಟೆ ದಿಗ್ಬಂಧನದಲ್ಲಿ ಇರಿಸಿದ್ದು ಖಂಡನೀಯ’ ಎಂದರು.</p><p>‘ದಿಗ್ಬಂಧನ ಖಂಡಿಸಿ ಹಾಗೂ ಮೂರು ಪ್ರಮುಖ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಶನಿವಾರ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ಬೆಳಿಗ್ಗೆ 10.30ಕ್ಕೆ ಧರಣಿ ಸತ್ಯಾಗ್ರಹ ಮಾಡುತ್ತೇವೆ’ ಎಂದು ರವಿಕುಮಾರ್ ಹೇಳಿದರು.</p><p>‘ಹೋರಾಟದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವ ಸಿ.ಟಿ.ರವಿ ಹಾಗೂ ಹತ್ತಾರು ಶಾಸಕರು, ಮುಖಂಡರು ಪಾಲ್ಗೊಳ್ಳುತ್ತಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>