ಬಿಜೆಪಿ ನಾಯಕರು ಲೈಂಗಿಕ ಕಿರುಕುಳದ ಆರೋಪಿ ವಿರುದ್ಧ ಹಾಸನದಲ್ಲಿ ಏಕೆ ಪ್ರತಿಭಟನೆ ನಡೆಸಲಿಲ್ಲ? ಸಂತ್ರಸ್ತರು ಮಹಿಳೆಯರಲ್ಲವೇ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರನ್ನು ಪ್ರಶ್ನಿಸಿದ ಪ್ರಿಯಾಂಕ್, ಆರೋಪಿ ಅನ್ಯ ಧರ್ಮದವನಾಗಿದ್ದರೆ ಬಿಜೆಪಿ ನಾಯಕರು ಪ್ರತಿಭಟನೆಗೆ ಸಾಲುಗಟ್ಟಿ ನಿಲ್ಲುತ್ತಿದ್ದರು. ಕಾಂಗ್ರೆಸ್ಗೆ ಎಲ್ಲರೂ ಸಮಾನರು, ಇಂತಹ ಘೋರ ಅಪರಾಧಗಳಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳ ವಿರುದ್ಧವೂ ಧ್ವನಿ ಎತ್ತುತ್ತದೆ ಎಂದು ಹೇಳಿದರು.