<p><strong>ಬೆಂಗಳೂರು:</strong> 'ಪ್ರಧಾನಿ ನರೇಂದ್ರ ಮೋದಿ ಅವರ ಹೊಣೆಗಾರಿಕೆಯನ್ನು 'ಮುಖ್ಯಮಂತ್ರಿ ಮೋದಿ' ಅವರಿಗಿಂತ ಚೆನ್ನಾಗಿ ಬೇರೆ ಯಾರು ಬಯಲು ಮಾಡಲು ಸಾಧ್ಯವಿಲ್ಲ' ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಇಂದು (ಬುಧವಾರ) ಆರೋಪಿಸಿದ್ದಾರೆ. </p><p>ಈ ಸಂಬಂಧ ಪ್ರಧಾನಿ ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗ ಭಯೋತ್ಪಾದನೆ ಕುರಿತು ನೀಡಿದ್ದ ಹೇಳಿಕೆಯ ವಿಡಿಯೊವನ್ನು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪ್ರಿಯಾಂಕ್ ಖರ್ಗೆ ಹಂಚಿಕೊಂಡಿದ್ದಾರೆ. </p><p>'ಪ್ರಧಾನಿ ಪಾಲಿಗೆ ಹೊಣೆಗಾರಿಕೆ ಎಂಬುದು ಇತರರಿಗೆ ಮಾತ್ರ ಅನ್ವಯಿಸುತ್ತದೆ. ವಿರೋಧ ಪಕ್ಷದಲ್ಲಿದ್ದಾಗ ಹೊಣೆಗಾರಿಕೆ ಬಗ್ಗೆ ಮಾತನಾಡುವ ಪ್ರಧಾನಿ ಅಧಿಕಾರದಲ್ಲಿದ್ದಾಗ ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತಾರೆ' ಎಂದು ವಾಗ್ದಾಳಿ ನಡೆಸಿದ್ದಾರೆ. </p><p>'ಪ್ರಧಾನಿ ಮೋದಿ ಒಬ್ಬ ಪಲಾಯನವಾದಿ. ಸುದ್ದಿಗೋಷ್ಠಿಯಿಂದ ತಪ್ಪಿಸಿಕೊಳ್ಳುತ್ತಾರೆ, ಸಂಸತ್ತನ್ನು ಕಡೆಗಣಿಸುತ್ತಾರೆ. ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ವಿಷಯಾಂತರ ಮಾಡುತ್ತಾರೆ' ಎಂದು ಟೀಕಿಸಿದ್ದಾರೆ. </p>.RSS ಕಾರ್ಯಕ್ರಮವಾಗಲಿ, ನಮಾಜ್ ಆಗಲಿ ಎಲ್ಲರಿಗೂ ಒಂದೇ ನಿಯಮ: ಪ್ರಿಯಾಂಕ್ ಖರ್ಗೆ.ರಾಷ್ಟ್ರಧ್ವಜಕ್ಕೆ RSS ಅಗೌರವ ತೋರಿ 100 ವರ್ಷ: ದಾಖಲೆ ಬಿಡುಗಡೆ ಮಾಡಿದ ಪ್ರಿಯಾಂಕ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> 'ಪ್ರಧಾನಿ ನರೇಂದ್ರ ಮೋದಿ ಅವರ ಹೊಣೆಗಾರಿಕೆಯನ್ನು 'ಮುಖ್ಯಮಂತ್ರಿ ಮೋದಿ' ಅವರಿಗಿಂತ ಚೆನ್ನಾಗಿ ಬೇರೆ ಯಾರು ಬಯಲು ಮಾಡಲು ಸಾಧ್ಯವಿಲ್ಲ' ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಇಂದು (ಬುಧವಾರ) ಆರೋಪಿಸಿದ್ದಾರೆ. </p><p>ಈ ಸಂಬಂಧ ಪ್ರಧಾನಿ ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗ ಭಯೋತ್ಪಾದನೆ ಕುರಿತು ನೀಡಿದ್ದ ಹೇಳಿಕೆಯ ವಿಡಿಯೊವನ್ನು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪ್ರಿಯಾಂಕ್ ಖರ್ಗೆ ಹಂಚಿಕೊಂಡಿದ್ದಾರೆ. </p><p>'ಪ್ರಧಾನಿ ಪಾಲಿಗೆ ಹೊಣೆಗಾರಿಕೆ ಎಂಬುದು ಇತರರಿಗೆ ಮಾತ್ರ ಅನ್ವಯಿಸುತ್ತದೆ. ವಿರೋಧ ಪಕ್ಷದಲ್ಲಿದ್ದಾಗ ಹೊಣೆಗಾರಿಕೆ ಬಗ್ಗೆ ಮಾತನಾಡುವ ಪ್ರಧಾನಿ ಅಧಿಕಾರದಲ್ಲಿದ್ದಾಗ ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತಾರೆ' ಎಂದು ವಾಗ್ದಾಳಿ ನಡೆಸಿದ್ದಾರೆ. </p><p>'ಪ್ರಧಾನಿ ಮೋದಿ ಒಬ್ಬ ಪಲಾಯನವಾದಿ. ಸುದ್ದಿಗೋಷ್ಠಿಯಿಂದ ತಪ್ಪಿಸಿಕೊಳ್ಳುತ್ತಾರೆ, ಸಂಸತ್ತನ್ನು ಕಡೆಗಣಿಸುತ್ತಾರೆ. ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ವಿಷಯಾಂತರ ಮಾಡುತ್ತಾರೆ' ಎಂದು ಟೀಕಿಸಿದ್ದಾರೆ. </p>.RSS ಕಾರ್ಯಕ್ರಮವಾಗಲಿ, ನಮಾಜ್ ಆಗಲಿ ಎಲ್ಲರಿಗೂ ಒಂದೇ ನಿಯಮ: ಪ್ರಿಯಾಂಕ್ ಖರ್ಗೆ.ರಾಷ್ಟ್ರಧ್ವಜಕ್ಕೆ RSS ಅಗೌರವ ತೋರಿ 100 ವರ್ಷ: ದಾಖಲೆ ಬಿಡುಗಡೆ ಮಾಡಿದ ಪ್ರಿಯಾಂಕ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>