<p><strong>ಕಲಬುರಗಿ:</strong> ‘ಆರ್ಎಸ್ಎಸ್ನವರು ಪಥಸಂಚಲನ ನಡೆಸುವ ಬಗ್ಗೆ ಮಾಹಿತಿ ನೀಡಿದ್ದಾರೆ, ಅನುಮತಿ ಕೇಳಿಲ್ಲ. ಮಾಹಿತಿ ಕೊಟ್ಟ ತಕ್ಷಣ ಹೋಗಿ ರಕ್ಷಣೆ ಕೊಡಲು ಗೃಹ ಇಲಾಖೆ, ಸರ್ಕಾರದವರೇನು ಅವರ ಆಳು ಮಕ್ಕಳಾ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಇಲ್ಲಿ ಪ್ರಶ್ನಿಸಿದರು.</p><p>ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚಿತ್ತಾಪುರ ಯುವಕರ ಭವಿಷ್ಯದ ಪ್ರಶ್ನೆ ಬಂದಾಗ ಕಾನೂನು ಕ್ರಮ ಜರುಗಿಸಲಾಗಿದೆ. ನೋಂದಣಿಯಾಗದ ಒಂದು ಸಂಸ್ಥೆಯ ಕಾರ್ಯಕರ್ತರು ಲಾಠಿ ಹಿಡಿದು ಪಥಸಂಚಲನ ಮಾಡಿದರೆ, ಜನರಲ್ಲಿ ಭೀತಿ ಮೂಡುವುದಿಲ್ಲವೇ? ಹೆಚ್ಚುಕಮ್ಮಿ ಆದರೆ ಯಾರು ಹೊಣೆ’ ಎಂದು ಪ್ರಶ್ನಿಸಿದರು.</p><p>‘ಆರ್ಎಸ್ಎಸ್ನವರು ಚಿತ್ತಾಪುರದಲ್ಲಿಪಥಸಂಚಲನ ನಡೆಸುವ ವಿಚಾರ ಪ್ರತಿಷ್ಠೆ ಮಾಡಿಕೊಂಡಿದ್ದಾರೆ. ಅವರು ಮಾಹಿತಿ ಕೊಡುವುದನ್ನು ಬಿಟ್ಟು, ಅನುಮತಿ ಕೇಳಿದರೆ, ಪರಿಸ್ಥಿತಿ ನೋಡಿಕೊಂಡು ಸ್ಥಳೀಯ ಆಡಳಿತವೇ ನಿರ್ಧಾರ ಕೈಗೊಳ್ಳುತ್ತದೆ’ ಎಂದರು.</p><p>‘ಆರ್ಎಸ್ಎಸ್ ನೋಂದಣಿ ಪತ್ರದ ವಿಚಾರ ಕುರಿತು ಹೈಕೋರ್ಟ್ನಲ್ಲಿ ಸಕಾಲದಲ್ಲಿ ಪ್ರಶ್ನಿಸಲಾಗುವುದು. ಈಗ ಪಥಸಂಚಲನದ ವಿಚಾರ ಮಾತ್ರ ಬಂದಿದೆ’ ಎಂದರು. ‘ಸೇಡಂನಲ್ಲಿ ಕಾನೂನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನ ನಡೆಸಿದೆ. ಅದನ್ನೂ ಕೋರ್ಟ್ ಗಮನಕ್ಕೆ ತರಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ‘ಆರ್ಎಸ್ಎಸ್ನವರು ಪಥಸಂಚಲನ ನಡೆಸುವ ಬಗ್ಗೆ ಮಾಹಿತಿ ನೀಡಿದ್ದಾರೆ, ಅನುಮತಿ ಕೇಳಿಲ್ಲ. ಮಾಹಿತಿ ಕೊಟ್ಟ ತಕ್ಷಣ ಹೋಗಿ ರಕ್ಷಣೆ ಕೊಡಲು ಗೃಹ ಇಲಾಖೆ, ಸರ್ಕಾರದವರೇನು ಅವರ ಆಳು ಮಕ್ಕಳಾ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಇಲ್ಲಿ ಪ್ರಶ್ನಿಸಿದರು.</p><p>ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚಿತ್ತಾಪುರ ಯುವಕರ ಭವಿಷ್ಯದ ಪ್ರಶ್ನೆ ಬಂದಾಗ ಕಾನೂನು ಕ್ರಮ ಜರುಗಿಸಲಾಗಿದೆ. ನೋಂದಣಿಯಾಗದ ಒಂದು ಸಂಸ್ಥೆಯ ಕಾರ್ಯಕರ್ತರು ಲಾಠಿ ಹಿಡಿದು ಪಥಸಂಚಲನ ಮಾಡಿದರೆ, ಜನರಲ್ಲಿ ಭೀತಿ ಮೂಡುವುದಿಲ್ಲವೇ? ಹೆಚ್ಚುಕಮ್ಮಿ ಆದರೆ ಯಾರು ಹೊಣೆ’ ಎಂದು ಪ್ರಶ್ನಿಸಿದರು.</p><p>‘ಆರ್ಎಸ್ಎಸ್ನವರು ಚಿತ್ತಾಪುರದಲ್ಲಿಪಥಸಂಚಲನ ನಡೆಸುವ ವಿಚಾರ ಪ್ರತಿಷ್ಠೆ ಮಾಡಿಕೊಂಡಿದ್ದಾರೆ. ಅವರು ಮಾಹಿತಿ ಕೊಡುವುದನ್ನು ಬಿಟ್ಟು, ಅನುಮತಿ ಕೇಳಿದರೆ, ಪರಿಸ್ಥಿತಿ ನೋಡಿಕೊಂಡು ಸ್ಥಳೀಯ ಆಡಳಿತವೇ ನಿರ್ಧಾರ ಕೈಗೊಳ್ಳುತ್ತದೆ’ ಎಂದರು.</p><p>‘ಆರ್ಎಸ್ಎಸ್ ನೋಂದಣಿ ಪತ್ರದ ವಿಚಾರ ಕುರಿತು ಹೈಕೋರ್ಟ್ನಲ್ಲಿ ಸಕಾಲದಲ್ಲಿ ಪ್ರಶ್ನಿಸಲಾಗುವುದು. ಈಗ ಪಥಸಂಚಲನದ ವಿಚಾರ ಮಾತ್ರ ಬಂದಿದೆ’ ಎಂದರು. ‘ಸೇಡಂನಲ್ಲಿ ಕಾನೂನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನ ನಡೆಸಿದೆ. ಅದನ್ನೂ ಕೋರ್ಟ್ ಗಮನಕ್ಕೆ ತರಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>