<p><strong>ಬೆಂಗಳೂರು</strong>: ‘ಬಾಂಗ್ಲಾ ದೇಶಿಯರು ಕರ್ನಾಟಕಕ್ಕೆ ಹೇಗೆ ಬರುತ್ತಾರೆ? ಕೇಂದ್ರ ಗೃಹ ಸಚಿವ ಅಮಿತ್ ಶಾ ಕಡಲೆಕಾಯಿ ತಿನ್ನುತ್ತಿದ್ದಾರಾ?’ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ದೇಶದ ಗಡಿ ಕಾಯುವುದು ರಾಜ್ಯದ ಗೃಹ ಸಚಿವ ಪರಮೇಶ್ವರ ಅವರ ಕೆಲಸವೇ? ಬಿಜೆಪಿ ಅಧಿಕಾರ ಇರುವ ರಾಜ್ಯಗಳನ್ನು ದಾಟಿ ಬಾಂಗ್ಲಾ ದೇಶಿಯರು ಹೇಗೆ ಕರ್ನಾಟಕಕ್ಕೆ ಬರುತ್ತಾರೆ’ ಎಂದೂ ಪ್ರಶ್ನಿಸಿದರು.</p>.<p>ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣಕ್ಕೆ ಮತ್ತೆ ಮರಳುವ ಕುರಿತು ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್, ‘ಅವರು ಪಂಚಾಯತ್ ಚುನಾವಣೆ ಮಾಡುತ್ತಾರಾ ಅಥವಾ ಪಾರ್ಲಿಮೆಂಟ್ ಚುನಾವಣೆ ಮಾಡುತ್ತಾರಾ ಎನ್ನುವುದು ಅವರ ಪಕ್ಷಕ್ಕೆ ಸಂಬಂಧಪಟ್ಟಿದ್ದು. ಅದಕ್ಕೂ ನಮಗೂ ಏನು ಸಂಬಂಧ’ ಎಂದರು.</p>.<p>‘ಜೆಡಿಎಸ್ ಈಗಾಗಲೇ ನಿರ್ನಾಮದ ಹಾದಿಯಲ್ಲಿದೆ. ಜೆಡಿಎಸ್ ಪಕ್ಷವನ್ನು ಬಿಜೆಪಿಗೆ ಭೋಗ್ಯಕ್ಕೆ ಕೊಟ್ಟು ಬಿಟ್ಟಿದ್ದಾರೆ. ಅವರ ಸಂಬಂಧಿಕರೇ ಹೋಗಿ ಬಿಜೆಪಿ ಟಿಕೆಟ್ ತೆಗೆದುಕೊಂಡು ಚುನಾವಣೆಗೆ ನಿಲ್ಲುತ್ತಾರೆಂದರೆ, ಪಕ್ಷ ಎಷ್ಟರ ಮಟ್ಟಿಗೆ ಬೆಳೆಯುತ್ತಿದೆ ಎಂದು ಯೋಚನೆ ಮಾಡಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಬಾಂಗ್ಲಾ ದೇಶಿಯರು ಕರ್ನಾಟಕಕ್ಕೆ ಹೇಗೆ ಬರುತ್ತಾರೆ? ಕೇಂದ್ರ ಗೃಹ ಸಚಿವ ಅಮಿತ್ ಶಾ ಕಡಲೆಕಾಯಿ ತಿನ್ನುತ್ತಿದ್ದಾರಾ?’ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ದೇಶದ ಗಡಿ ಕಾಯುವುದು ರಾಜ್ಯದ ಗೃಹ ಸಚಿವ ಪರಮೇಶ್ವರ ಅವರ ಕೆಲಸವೇ? ಬಿಜೆಪಿ ಅಧಿಕಾರ ಇರುವ ರಾಜ್ಯಗಳನ್ನು ದಾಟಿ ಬಾಂಗ್ಲಾ ದೇಶಿಯರು ಹೇಗೆ ಕರ್ನಾಟಕಕ್ಕೆ ಬರುತ್ತಾರೆ’ ಎಂದೂ ಪ್ರಶ್ನಿಸಿದರು.</p>.<p>ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣಕ್ಕೆ ಮತ್ತೆ ಮರಳುವ ಕುರಿತು ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್, ‘ಅವರು ಪಂಚಾಯತ್ ಚುನಾವಣೆ ಮಾಡುತ್ತಾರಾ ಅಥವಾ ಪಾರ್ಲಿಮೆಂಟ್ ಚುನಾವಣೆ ಮಾಡುತ್ತಾರಾ ಎನ್ನುವುದು ಅವರ ಪಕ್ಷಕ್ಕೆ ಸಂಬಂಧಪಟ್ಟಿದ್ದು. ಅದಕ್ಕೂ ನಮಗೂ ಏನು ಸಂಬಂಧ’ ಎಂದರು.</p>.<p>‘ಜೆಡಿಎಸ್ ಈಗಾಗಲೇ ನಿರ್ನಾಮದ ಹಾದಿಯಲ್ಲಿದೆ. ಜೆಡಿಎಸ್ ಪಕ್ಷವನ್ನು ಬಿಜೆಪಿಗೆ ಭೋಗ್ಯಕ್ಕೆ ಕೊಟ್ಟು ಬಿಟ್ಟಿದ್ದಾರೆ. ಅವರ ಸಂಬಂಧಿಕರೇ ಹೋಗಿ ಬಿಜೆಪಿ ಟಿಕೆಟ್ ತೆಗೆದುಕೊಂಡು ಚುನಾವಣೆಗೆ ನಿಲ್ಲುತ್ತಾರೆಂದರೆ, ಪಕ್ಷ ಎಷ್ಟರ ಮಟ್ಟಿಗೆ ಬೆಳೆಯುತ್ತಿದೆ ಎಂದು ಯೋಚನೆ ಮಾಡಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>