<p><strong>ಬೆಂಗಳೂರು:</strong> ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ಶಾಖೆಗೆ ಹೋಗಿ ದೊಣ್ಣೆ ಹಿಡಿಯುವುದನ್ನು ಬಿಟ್ಟು ಜಗತ್ತಿನ ಆಗುಹೋಗುಗಳ ಬಗ್ಗೆ ತಿಳಿದುಕೊಳ್ಳಬೇಕಿತ್ತು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.</p>.ಗುಂಡಿ ತುಂಬಿದ ರಸ್ತೆಯಲ್ಲೇ ಜಾಗತಿಕ ಟೆಕ್ ಪ್ರತಿನಿಧಿಗಳು ಪ್ರಯಾಣಿಸಬೇಕೆ?: ಅಶೋಕ.<p>ಕಾಂಗ್ರೆಸ್ ಸರ್ಕಾರ ಹೂಡಿಕೆದಾರರನ್ನು ಮತ್ತು ಸ್ಟಾರ್ಟ್ಅಪ್ಗಳನ್ನು ಹೆದರಿಸಿ, ಬೆದರಿಸಿ, ಅವಮಾನ ಮಾಡಿ ಬೆಂಗಳೂರಿನ ವರ್ಚಸ್ಸಿಗೆ, ಜಾಗತಿಕ ಬ್ರ್ಯಾಂಡ್ಗೆ ಧಕ್ಕೆ ತಂದಿದೆ ಎನ್ನುವ ಅಶೋಕ ಅವರ ಆರೋಪಗಳಿಗೆ ಪ್ರಿಯಾಂಕ್ ಹೀಗೆ ತಿರುಗೇಟು ನೀಡಿದ್ದಾರೆ.</p>.ಸುರಂಗ ರಸ್ತೆ ಕುರಿತು ಜನರಿಗೆ ಉತ್ತರ ನೀಡಿ: ಆರ್. ಅಶೋಕ.<p>‘ನಮಸ್ತೆ ಟ್ರಂಪ್ಗಾಗಿ ಗುಜರಾತಿನ ಅಹಮದಾಬಾದ್ನ ಅವ್ಯವಸ್ಥೆಗಳಿಗೆ, ಬಡತನಕ್ಕೆ, ಕಸದ ಕೊಂಪೆಗಳಿಗೆ ಟಾರ್ಪಲ್ ಹಾಕಿ ಮುಚ್ಚಿಟ್ಟಿದ್ದಂತಹ ಪರಿಸ್ಥಿತಿ ಬೆಂಗಳೂರಿನಲ್ಲಿಲ್ಲ. ಜಿ20 ಶೃಂಗಸಭೆಗಾಗಿ ದೆಹಲಿಯ ಬಡವರಿಗೆ ದಿಗ್ಬಂಧನ ವಿಧಿಸಿ, ಬಡವರನ್ನು, ಬಡತನವನ್ನು ಬಂಧನದಲ್ಲಿಟ್ಟಿದ್ದಂತಹ ದುಃಸ್ಥಿತಿ ಬೆಂಗಳೂರಿಗೆ ಬಂದಿಲ್ಲ’ ಎಂದು ಪ್ರಿಯಾಂಕ್ ಬರೆದುಕೊಂಡಿದ್ದಾರೆ.</p><p>‘ಛತ್ ಪೂಜೆಗಾಗಿ ಯಮುನಾ ನದಿಯ ಪಕ್ಕದಲ್ಲಿ ಫಿಲ್ಟರ್ ನೀರಿನ ಕೊಳ ನಿರ್ಮಿಸಿ, ಯಮುನಾ ನದಿಯ ಅವ್ಯವಸ್ಥೆಯನ್ನು ಮರೆಮಾಚಿದಂತಹ ದುಃಸ್ಥಿತಿ ನಮಗೆ ಬಂದಿಲ್ಲ. ಬೆಂಗಳೂರಿನ ಬಗ್ಗೆ ಬಿಜೆಪಿಯವರಿಗೆ ಹೆಮ್ಮೆ ಎನಿಸದಿರಬಹುದು, ನಮಗೆ ಹೆಮ್ಮೆ ಇದೆ’ ಎಂದು ಹೇಳಿದ್ದಾರೆ.</p>.ಬೆಂಗಳೂರಿನ ಬಂಡೆ ಕೊರೆಯಬೇಡಿ: ಆರ್. ಅಶೋಕ ಮನವಿ.<p>ಬೆಂಗಳೂರಿನ ಮಹತ್ವದ ಬಗ್ಗೆ ಬಿಜೆಪಿಯವರಿಗೆ ಅರಿವಿಲ್ಲದಿರಬಹುದು, ಮರ್ಸಿಡಿಸ್ ಬೆಂಜ್ ನ CEOರಿಂದ ಹಿಡಿದು ದೇಶದ ಹೂಡಿಕೆದಾರರವರೆಗೂ ಅದರ ಅರಿವಿದೆ. ಜಾಗತಿಕ ಸ್ಟಾರ್ಟ್ ಅಪ್ ಎಕೊಸಿಸ್ಟಮ್ ಸೂಚ್ಯಂಕದಲ್ಲಿ ಬೆಂಗಳೂರು 14ನೇ ಸ್ಥಾನಕ್ಕೆ ಏರಿರುವುದು ನಮ್ಮ ಕಾರ್ಯವೈಖರಿಗೆ ಹಿಡಿದ ಕನ್ನಡಿ ಎಂದಿದ್ದಾರೆ.</p><p>ಅಶೋಕ ಅವರು ಶಾಖೆಗೆ ಹೋಗಿ ದೊಣ್ಣೆ ಹಿಡಿಯದನ್ನು ಬಿಟ್ಟು ಜಗತ್ತಿನ ಆಗುಹೋಗುಗಳ ಬಗ್ಗೆ, ಬೆಂಗಳೂರಿನ ಹೆಗ್ಗಳಿಕೆಯ ಬಗ್ಗೆ ತಿಳಿಯುವ ಪ್ರಯತ್ನ ನಡೆಸಿದ್ದರೆ ಈ ರೀತಿಯ ಅಪ್ರಬುದ್ಧ ಹೇಳಿಕೆ ನೀಡುತ್ತಿರಲಿಲ್ಲ ಎಂದು ಕುಟುಕಿದ್ದಾರೆ.</p> .ಸಿದ್ದರಾಮಯ್ಯ ವಯನಾಡ್ನ ನಿಧಿ ಸಂಗ್ರಾಹಕನಂತೆ ವರ್ತಿಸುತ್ತಿದ್ದಾರೆ: ಅಶೋಕ ಕಿಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ಶಾಖೆಗೆ ಹೋಗಿ ದೊಣ್ಣೆ ಹಿಡಿಯುವುದನ್ನು ಬಿಟ್ಟು ಜಗತ್ತಿನ ಆಗುಹೋಗುಗಳ ಬಗ್ಗೆ ತಿಳಿದುಕೊಳ್ಳಬೇಕಿತ್ತು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.</p>.ಗುಂಡಿ ತುಂಬಿದ ರಸ್ತೆಯಲ್ಲೇ ಜಾಗತಿಕ ಟೆಕ್ ಪ್ರತಿನಿಧಿಗಳು ಪ್ರಯಾಣಿಸಬೇಕೆ?: ಅಶೋಕ.<p>ಕಾಂಗ್ರೆಸ್ ಸರ್ಕಾರ ಹೂಡಿಕೆದಾರರನ್ನು ಮತ್ತು ಸ್ಟಾರ್ಟ್ಅಪ್ಗಳನ್ನು ಹೆದರಿಸಿ, ಬೆದರಿಸಿ, ಅವಮಾನ ಮಾಡಿ ಬೆಂಗಳೂರಿನ ವರ್ಚಸ್ಸಿಗೆ, ಜಾಗತಿಕ ಬ್ರ್ಯಾಂಡ್ಗೆ ಧಕ್ಕೆ ತಂದಿದೆ ಎನ್ನುವ ಅಶೋಕ ಅವರ ಆರೋಪಗಳಿಗೆ ಪ್ರಿಯಾಂಕ್ ಹೀಗೆ ತಿರುಗೇಟು ನೀಡಿದ್ದಾರೆ.</p>.ಸುರಂಗ ರಸ್ತೆ ಕುರಿತು ಜನರಿಗೆ ಉತ್ತರ ನೀಡಿ: ಆರ್. ಅಶೋಕ.<p>‘ನಮಸ್ತೆ ಟ್ರಂಪ್ಗಾಗಿ ಗುಜರಾತಿನ ಅಹಮದಾಬಾದ್ನ ಅವ್ಯವಸ್ಥೆಗಳಿಗೆ, ಬಡತನಕ್ಕೆ, ಕಸದ ಕೊಂಪೆಗಳಿಗೆ ಟಾರ್ಪಲ್ ಹಾಕಿ ಮುಚ್ಚಿಟ್ಟಿದ್ದಂತಹ ಪರಿಸ್ಥಿತಿ ಬೆಂಗಳೂರಿನಲ್ಲಿಲ್ಲ. ಜಿ20 ಶೃಂಗಸಭೆಗಾಗಿ ದೆಹಲಿಯ ಬಡವರಿಗೆ ದಿಗ್ಬಂಧನ ವಿಧಿಸಿ, ಬಡವರನ್ನು, ಬಡತನವನ್ನು ಬಂಧನದಲ್ಲಿಟ್ಟಿದ್ದಂತಹ ದುಃಸ್ಥಿತಿ ಬೆಂಗಳೂರಿಗೆ ಬಂದಿಲ್ಲ’ ಎಂದು ಪ್ರಿಯಾಂಕ್ ಬರೆದುಕೊಂಡಿದ್ದಾರೆ.</p><p>‘ಛತ್ ಪೂಜೆಗಾಗಿ ಯಮುನಾ ನದಿಯ ಪಕ್ಕದಲ್ಲಿ ಫಿಲ್ಟರ್ ನೀರಿನ ಕೊಳ ನಿರ್ಮಿಸಿ, ಯಮುನಾ ನದಿಯ ಅವ್ಯವಸ್ಥೆಯನ್ನು ಮರೆಮಾಚಿದಂತಹ ದುಃಸ್ಥಿತಿ ನಮಗೆ ಬಂದಿಲ್ಲ. ಬೆಂಗಳೂರಿನ ಬಗ್ಗೆ ಬಿಜೆಪಿಯವರಿಗೆ ಹೆಮ್ಮೆ ಎನಿಸದಿರಬಹುದು, ನಮಗೆ ಹೆಮ್ಮೆ ಇದೆ’ ಎಂದು ಹೇಳಿದ್ದಾರೆ.</p>.ಬೆಂಗಳೂರಿನ ಬಂಡೆ ಕೊರೆಯಬೇಡಿ: ಆರ್. ಅಶೋಕ ಮನವಿ.<p>ಬೆಂಗಳೂರಿನ ಮಹತ್ವದ ಬಗ್ಗೆ ಬಿಜೆಪಿಯವರಿಗೆ ಅರಿವಿಲ್ಲದಿರಬಹುದು, ಮರ್ಸಿಡಿಸ್ ಬೆಂಜ್ ನ CEOರಿಂದ ಹಿಡಿದು ದೇಶದ ಹೂಡಿಕೆದಾರರವರೆಗೂ ಅದರ ಅರಿವಿದೆ. ಜಾಗತಿಕ ಸ್ಟಾರ್ಟ್ ಅಪ್ ಎಕೊಸಿಸ್ಟಮ್ ಸೂಚ್ಯಂಕದಲ್ಲಿ ಬೆಂಗಳೂರು 14ನೇ ಸ್ಥಾನಕ್ಕೆ ಏರಿರುವುದು ನಮ್ಮ ಕಾರ್ಯವೈಖರಿಗೆ ಹಿಡಿದ ಕನ್ನಡಿ ಎಂದಿದ್ದಾರೆ.</p><p>ಅಶೋಕ ಅವರು ಶಾಖೆಗೆ ಹೋಗಿ ದೊಣ್ಣೆ ಹಿಡಿಯದನ್ನು ಬಿಟ್ಟು ಜಗತ್ತಿನ ಆಗುಹೋಗುಗಳ ಬಗ್ಗೆ, ಬೆಂಗಳೂರಿನ ಹೆಗ್ಗಳಿಕೆಯ ಬಗ್ಗೆ ತಿಳಿಯುವ ಪ್ರಯತ್ನ ನಡೆಸಿದ್ದರೆ ಈ ರೀತಿಯ ಅಪ್ರಬುದ್ಧ ಹೇಳಿಕೆ ನೀಡುತ್ತಿರಲಿಲ್ಲ ಎಂದು ಕುಟುಕಿದ್ದಾರೆ.</p> .ಸಿದ್ದರಾಮಯ್ಯ ವಯನಾಡ್ನ ನಿಧಿ ಸಂಗ್ರಾಹಕನಂತೆ ವರ್ತಿಸುತ್ತಿದ್ದಾರೆ: ಅಶೋಕ ಕಿಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>