ನಾನೂ ಮೂವತ್ತೈದು ವರ್ಷಗಳಿಂದ ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದೇನೆ. ನಮ್ಮ ಪಕ್ಷದಲ್ಲಿ ಎಂದೂ ಲೆಟರ್ ಸಂಸ್ಕೃತಿಯಿರಲಿಲ್ಲ. ಈಗ ಅದೂ ಶುರುವಾಗಿದೆ. ಕೆಜೆಪಿಯಿಂದ ಬಂದಾಗ ಯಡಿಯೂರಪ್ಪ ಅವರನ್ನು ಒಪ್ಪಿಕೊಂಡಿದ್ದೆವು. ಆದರೆ ‘ನಿಮ್ಮ ವರ್ತನೆ ಸರಿಪಡಿಸಿಕೊಳ್ಳಿ’ ಎಂದವರನ್ನೇ ಯಡಿಯೂರಪ್ಪ ಕೆಟ್ಟವರನ್ನಾಗಿ ಮಾಡಿದ್ದಾರೆ. ಸೊಗಡು ಶಿವಣ್ಣ, ಶಿವಯೋಗಿ ಸ್ವಾಮಿ, ಗಿರೀಶ್ ಪಟೇಲ್ ಸೇರಿದಂತೆ ಹಲವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡದೆ ಅನ್ಯಾಯ ಮಾಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.