<p>ಪ್ರಜಾವಾಣಿ ವಾರ್ತೆ</p>.<p><strong>ಬೆಂಗಳೂರು</strong>: ‘ಬಿಜೆಪಿಯ ಎನ್.ರವಿಕುಮಾರ್ ಅವರು ಕಲಬುರ್ಗಿ ಜಿಲ್ಲಾಧಿಕಾರಿ ಕುರಿತು ಆಡಿರುವ ಮಾತು ಆಕ್ಷೇಪಾರ್ಹ ಮತ್ತು ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಅವರು ಕ್ಷಮೆ ಕೇಳಬೇಕು’ ಎಂದು ಕಾಂಗ್ರೆಸ್ನ ಪ್ರೊ.ಬಿ.ಕೆ.ಚಂದ್ರಶೇಖರ್ ಅವರು ಕಳವಳ ವ್ಯಕ್ತಪಡಿಸಿದ್ದಾರೆ.</p>.<p>ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು, ‘ಕಲಬುರ್ಗಿ ಜಿಲ್ಲಾಧಿಕಾರಿ ಅವರು ಪಾಕಿಸ್ತಾನದಿಂದ ಬಂದವರಂತೆ ಕಾಣಿಸುತ್ತಾ ಇದೆ’ ಎಂದಿದ್ದನ್ನು ಖಂಡಿಸಿ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ.</p>.<p>‘ಬಿಜೆಪಿ ನಾಯಕರ ಮಾತುಗಳ ಬಗ್ಗೆ ನಾನು ಸಾಮಾನ್ಯವಾಗಿ ಪ್ರತಿಕ್ರಿಯಿಸುವುದಿಲ್ಲ. ಆದರೆ ಈ ಮಾತು ಅತ್ಯಂತ ಕೀಳು ಅಭಿರುಚಿಯದ್ದು. ಇವರೆಲ್ಲಾ ರಾಜ್ಯ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ತಮ್ಮ ಪಕ್ಷದ ಅಧಿಕೃತ ನಾಯಕರಾಗಿದ್ದಾರೆ. ಈ ಪಕ್ಷದ ಕೆಲ ನಾಯಕರು ಈ ಹಿಂದೆ ನ್ಯಾಯಾಲಯಗಳು ಮತ್ತು ಅವುಗಳ ತೀರ್ಪಿನ ವಿರುದ್ಧವೂ ಮಾತನಾಡಿದ್ದಾರೆ’ ಎಂದಿದ್ದಾರೆ.</p>.<p>‘ಇಂತಹ ಮಾತುಗಳನ್ನು ಆಡುವ ಇವರು ನಂತರ, ‘ನಮ್ಮಿಂದ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇವೆ’ ಎನ್ನುವ ಸುಲಭದ ದಾರಿ ಕಂಡುಕೊಂಡಿದ್ದಾರೆ. ಎನ್.ರವಿಕುಮಾರ್ ಅವರು ಬೇಷರತ್ ಕ್ಷಮೆ ಯಾಚಿಸಬೇಕು ಎಂದು ಐಎಎಸ್ ಅಧಿಕಾರಿಗಳ ಸಂಘದ ಬೇಡಿಕೆಯನ್ನು ನಾನು ಬೆಂಬಲಿಸುತ್ತೇನೆ’ ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p><strong>ಬೆಂಗಳೂರು</strong>: ‘ಬಿಜೆಪಿಯ ಎನ್.ರವಿಕುಮಾರ್ ಅವರು ಕಲಬುರ್ಗಿ ಜಿಲ್ಲಾಧಿಕಾರಿ ಕುರಿತು ಆಡಿರುವ ಮಾತು ಆಕ್ಷೇಪಾರ್ಹ ಮತ್ತು ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಅವರು ಕ್ಷಮೆ ಕೇಳಬೇಕು’ ಎಂದು ಕಾಂಗ್ರೆಸ್ನ ಪ್ರೊ.ಬಿ.ಕೆ.ಚಂದ್ರಶೇಖರ್ ಅವರು ಕಳವಳ ವ್ಯಕ್ತಪಡಿಸಿದ್ದಾರೆ.</p>.<p>ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು, ‘ಕಲಬುರ್ಗಿ ಜಿಲ್ಲಾಧಿಕಾರಿ ಅವರು ಪಾಕಿಸ್ತಾನದಿಂದ ಬಂದವರಂತೆ ಕಾಣಿಸುತ್ತಾ ಇದೆ’ ಎಂದಿದ್ದನ್ನು ಖಂಡಿಸಿ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ.</p>.<p>‘ಬಿಜೆಪಿ ನಾಯಕರ ಮಾತುಗಳ ಬಗ್ಗೆ ನಾನು ಸಾಮಾನ್ಯವಾಗಿ ಪ್ರತಿಕ್ರಿಯಿಸುವುದಿಲ್ಲ. ಆದರೆ ಈ ಮಾತು ಅತ್ಯಂತ ಕೀಳು ಅಭಿರುಚಿಯದ್ದು. ಇವರೆಲ್ಲಾ ರಾಜ್ಯ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ತಮ್ಮ ಪಕ್ಷದ ಅಧಿಕೃತ ನಾಯಕರಾಗಿದ್ದಾರೆ. ಈ ಪಕ್ಷದ ಕೆಲ ನಾಯಕರು ಈ ಹಿಂದೆ ನ್ಯಾಯಾಲಯಗಳು ಮತ್ತು ಅವುಗಳ ತೀರ್ಪಿನ ವಿರುದ್ಧವೂ ಮಾತನಾಡಿದ್ದಾರೆ’ ಎಂದಿದ್ದಾರೆ.</p>.<p>‘ಇಂತಹ ಮಾತುಗಳನ್ನು ಆಡುವ ಇವರು ನಂತರ, ‘ನಮ್ಮಿಂದ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇವೆ’ ಎನ್ನುವ ಸುಲಭದ ದಾರಿ ಕಂಡುಕೊಂಡಿದ್ದಾರೆ. ಎನ್.ರವಿಕುಮಾರ್ ಅವರು ಬೇಷರತ್ ಕ್ಷಮೆ ಯಾಚಿಸಬೇಕು ಎಂದು ಐಎಎಸ್ ಅಧಿಕಾರಿಗಳ ಸಂಘದ ಬೇಡಿಕೆಯನ್ನು ನಾನು ಬೆಂಬಲಿಸುತ್ತೇನೆ’ ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>