ಹಾಗೆಯೇ, ವಿಶೇಷ ಘಟಕ ಯೋಜನೆ (ಎಸ್ಸಿಎಸ್ಪಿ) ಮತ್ತು ಗಿರಿಜನ ಉಪಯೋಜನೆ (ಟಿಎಸ್ಪಿ) ಅನುದಾನದಲ್ಲಿ ವಿಶ್ವವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ವಿಭಾಗಗಳಲ್ಲಿ ‘ಸ್ಮಾರ್ಟ್ಕ್ಲಾಸ್’ಗಳನ್ನು ಸಿದ್ಧಪಡಿಸಲಾಗಿತ್ತು. ಮಾರುಕಟ್ಟೆ ಬೆಲೆಗಿಂತ ಅಧಿಕ ದರದಲ್ಲಿ ಸಾಮಗ್ರಿಗಳನ್ನು ಖರೀದಿಸಿ ವಂಚಿಸಲಾಗಿದೆ. ಭೌತಿಕ ಪರಿಶೀಲನೆ ನಡೆಸದೆ, ನಗದು ರಸೀದಿ ಪಡೆಯದೆ ಗುತ್ತಿಗೆ ಕಂಪನಿಯೊಂದಕ್ಕೆ ₹2.99 ಕೋಟಿ ಪಾವತಿಸಲಾಗಿದೆ ಎಂದು ದೂರಿ ವಿದ್ಯಾವಿಷಯಕ ಪರಿಷತ್ ಸದಸ್ಯರಾದ ವೈ.ಆರ್ತೋಬ ನಾಯಕ ದೂರು ನೀಡಿದ್ದರು.