ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು ಜುಲೈ 7ರಂದು ನೀಡಿದ್ದ ವರದಿಯಲ್ಲಿ, ಪ್ರಾಂಶುಪಾಲರ ವೃಂದಕ್ಕೆ ಬಡ್ತಿ ನೀಡುವ ವೇಳೆ ಪರಿಶಿಷ್ಟ ಜಾತಿಗೆ 60, ಪರಿಶಿಷ್ಟ ಪಂಗಡಕ್ಕೆ 11 ಸೇರಿ 71 ಹುದ್ದೆಗಳು ಮತ್ತು ಹೈದರಾಬಾದ್ ಕರ್ನಾಟಕ ಸ್ಥಳೀಯ ವೃಂದದಲ್ಲಿ ಪರಿಶಿಷ್ಟ ಜಾತಿಯ 7, ಪರಿಶಿಷ್ಟ ಪಂಗಡದ 2 ಸೇರಿ 9 ಹೀಗೆ ಒಟ್ಟು 80 ಹುದ್ದೆಗಳಿಗೆ ವಂಚನೆಯಾಗಿದೆ ಎಂದು ವರದಿ ನೀಡಿದ್ದರು. ಆ ಬಳಿಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯ ಕೋರಿದ್ದ ವರದಿಗೆ ಮಾಹಿತಿ ನೀಡಿದ್ದ ಆಯುಕ್ತರು, ಜುಲೈ 7 ವರದಿಯಂತೆ ಕ್ರಮ ವಹಿಸಬೇಕು ಎಂದು ತಿಳಿಸಿದ್ದರು. ಅದನ್ನು ಪರಿಗಣಿಸಿಲ್ಲ ಎಂದು ದೂರಿದ್ದಾರೆ.