<p><strong>ಬೆಂಗಳೂರು</strong>: ಆಸ್ತಿ ಕಲಹಕ್ಕೆ ಸಂಬಂಧಿಸಿದ ತಕರಾರು ಪ್ರಕರಣವೊಂದರಲ್ಲಿ ತಂಗಿಯ ಮೇಲೆ ಅಣ್ಣನೊಬ್ಬ ನಾಯಿ ಛೂ ಬಿಟ್ಟು ಜೀವ ಬೆದರಿಕೆ ಹಾಕಿದ ಆರೋಪದ ತನಿಖಾ ದಾಖಲೆಗಳನ್ನು ಸಲ್ಲಿಸುವಂತೆ ಹೈಕೋರ್ಟ್ ಹಲಸೂರು ಪೊಲೀಸರಿಗೆ ನಿರ್ದೇಶಿಸಿದೆ.</p>.<p>‘ಜೀವ ಬೆದರಿಕೆ ಆರೋಪಕ್ಕೆ ಸಂಬಂಧಿಸಿದಂತೆ ನಮ್ಮ ವಿರುದ್ಧ ಎಸಿಎಂಎಂ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿ ಪುರುಷೋತ್ತಮ್ ಮತ್ತು ಅವರ ಪತ್ನಿ ಭಾಗ್ಯ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. </p>.<p>ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲೆಯನ್ನು ಪ್ರಶ್ನಿಸಿದ ನ್ಯಾಯಮೂರ್ತಿಗಳು, ‘ಏನ್ರೀ ಮನೆಗೆ ಬಂದರೆ ನಾಯಿ ಛೂ ಬಿಡುತ್ತಾರಾ ನಿಮ್ಮ ಅರ್ಜಿದಾರರು’ ಎಂದು ಪ್ರಶ್ನಿಸಿದರು.</p>.<p>ಇದಕ್ಕೆ ವಕೀಲೆ, ‘ಅದು ಸಾಕಿದ ನಾಯಿ, ಅಷ್ಟಕ್ಕೂ ಅವರ ಸಹೋದರಿ ಬಂದಾಗ ಕಟ್ಟಿ ಹಾಕಲಾಗಿತ್ತು. ಅರ್ಜಿದಾರರ ಮೇಲಿನ ಆರೋಪಗಳು ಸುಳ್ಳು’ ಎಂದು ತಿಳಿಸಿದರು. </p>.<p>ಆದರೆ, ಇದಕ್ಕೆ ತೃಪ್ತರಾಗದ ನ್ಯಾಯಮೂರ್ತಿಗಳು, ‘ಸಾಕು ನಾಯಿನಾ? ಸಾಕಿದ ನಾಯಿ ಎಂದರೆ ಕಚ್ಚುವುದಿಲ್ಲವೇ? ಕಟ್ಟಿ ಹಾಕಿದ ನಾಯಿಯನ್ನು ದೂರುದಾರರ ಮೇಲೆ ಏಕೆ ಛೂ ಬಿಟ್ಟರು? ಆಸ್ತಿ ವಿವಾದವಿದ್ದರೆ ಆ ಸಮಸ್ಯೆ ಬಗೆಹರಿಸಲು ನಾಯಿಗೆ ಏಕೆ ಹೇಳಿದಿರಿ ಎಂದು ಕುಟುಕಿದರು.</p>.<p>‘ಪ್ರಕರಣದ ಕುರಿತಂತೆ ತನಿಖೆಯ ದಾಖಲೆಗಳನ್ನು ಕೋರ್ಟ್ಗೆ ಸಲ್ಲಿಸಿ’ ಎಂದು ಪ್ರಾಸಿಕ್ಯೂಷನ್ ಪರ ವಕೀಲರಿಗೆ ಸೂಚಿಸಿ ಇದೇ 19ಕ್ಕೆ ವಿಚಾರಣೆ ಮುಂದೂಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಆಸ್ತಿ ಕಲಹಕ್ಕೆ ಸಂಬಂಧಿಸಿದ ತಕರಾರು ಪ್ರಕರಣವೊಂದರಲ್ಲಿ ತಂಗಿಯ ಮೇಲೆ ಅಣ್ಣನೊಬ್ಬ ನಾಯಿ ಛೂ ಬಿಟ್ಟು ಜೀವ ಬೆದರಿಕೆ ಹಾಕಿದ ಆರೋಪದ ತನಿಖಾ ದಾಖಲೆಗಳನ್ನು ಸಲ್ಲಿಸುವಂತೆ ಹೈಕೋರ್ಟ್ ಹಲಸೂರು ಪೊಲೀಸರಿಗೆ ನಿರ್ದೇಶಿಸಿದೆ.</p>.<p>‘ಜೀವ ಬೆದರಿಕೆ ಆರೋಪಕ್ಕೆ ಸಂಬಂಧಿಸಿದಂತೆ ನಮ್ಮ ವಿರುದ್ಧ ಎಸಿಎಂಎಂ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿ ಪುರುಷೋತ್ತಮ್ ಮತ್ತು ಅವರ ಪತ್ನಿ ಭಾಗ್ಯ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. </p>.<p>ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲೆಯನ್ನು ಪ್ರಶ್ನಿಸಿದ ನ್ಯಾಯಮೂರ್ತಿಗಳು, ‘ಏನ್ರೀ ಮನೆಗೆ ಬಂದರೆ ನಾಯಿ ಛೂ ಬಿಡುತ್ತಾರಾ ನಿಮ್ಮ ಅರ್ಜಿದಾರರು’ ಎಂದು ಪ್ರಶ್ನಿಸಿದರು.</p>.<p>ಇದಕ್ಕೆ ವಕೀಲೆ, ‘ಅದು ಸಾಕಿದ ನಾಯಿ, ಅಷ್ಟಕ್ಕೂ ಅವರ ಸಹೋದರಿ ಬಂದಾಗ ಕಟ್ಟಿ ಹಾಕಲಾಗಿತ್ತು. ಅರ್ಜಿದಾರರ ಮೇಲಿನ ಆರೋಪಗಳು ಸುಳ್ಳು’ ಎಂದು ತಿಳಿಸಿದರು. </p>.<p>ಆದರೆ, ಇದಕ್ಕೆ ತೃಪ್ತರಾಗದ ನ್ಯಾಯಮೂರ್ತಿಗಳು, ‘ಸಾಕು ನಾಯಿನಾ? ಸಾಕಿದ ನಾಯಿ ಎಂದರೆ ಕಚ್ಚುವುದಿಲ್ಲವೇ? ಕಟ್ಟಿ ಹಾಕಿದ ನಾಯಿಯನ್ನು ದೂರುದಾರರ ಮೇಲೆ ಏಕೆ ಛೂ ಬಿಟ್ಟರು? ಆಸ್ತಿ ವಿವಾದವಿದ್ದರೆ ಆ ಸಮಸ್ಯೆ ಬಗೆಹರಿಸಲು ನಾಯಿಗೆ ಏಕೆ ಹೇಳಿದಿರಿ ಎಂದು ಕುಟುಕಿದರು.</p>.<p>‘ಪ್ರಕರಣದ ಕುರಿತಂತೆ ತನಿಖೆಯ ದಾಖಲೆಗಳನ್ನು ಕೋರ್ಟ್ಗೆ ಸಲ್ಲಿಸಿ’ ಎಂದು ಪ್ರಾಸಿಕ್ಯೂಷನ್ ಪರ ವಕೀಲರಿಗೆ ಸೂಚಿಸಿ ಇದೇ 19ಕ್ಕೆ ವಿಚಾರಣೆ ಮುಂದೂಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>