ಗೋಹತ್ಯೆ ನಿಷೇಧ ಕಾಯ್ದೆ ವಿಚಾರದಲ್ಲಿ ನಾನು ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ, ಈ ಹಿಂದೆ ಬಿಜೆಪಿ ಸರ್ಕಾರವು ಗೋಹತ್ಯೆ ನಿಷೇಧ ಕಾಯ್ದೆಗೆ ತಿದ್ದುಪಡಿ ತಂದಿತ್ತು. ಮತ್ತೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು, ಹಳೆ ಕಾಯ್ದೆಯನ್ನೇ ಉಳಿಸಿಕೊಂಡಿತ್ತು. ಇದೀಗ ಮತ್ತೆ ಬಿಜೆಪಿ ಸರ್ಕಾರವು ಗೋಹತ್ಯೆ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ. ಅದಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ಸಿಕ್ಕರೂ ಪರಿಷತ್ನಲ್ಲಿ ಒಪ್ಪಿಗೆ ದೊರೆತಿಲ್ಲ. ಸುಗ್ರೀವಾಜ್ಞೆಯ ಮೂಲಕ ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿಗೆ ಒಪ್ಪಿಗೆ ಪಡೆಯಲು ಸರ್ಕಾರ ಮುಂದಾಗಿದೆ’ ಎಂದು ಅಜೀಂ ಪ್ರತಿಕ್ರಿಯಿಸಿದರು.