<p><strong>ಹೂವಿನಹಡಗಲಿ:</strong> ದೇಶದ ಮೂಲ ನಿವಾಸಿಗಳನ್ನು ಜನಾಂಗೀಯ ಆಧಾರದಲ್ಲಿ ವಿಭಜಿಸುವ ಸಂವಿಧಾನ ವಿರೋಧಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು ಎಂದು ಮಾಜಿ ಶಾಸಕ ಶಿರಾಜ್ ಶೇಖ್ ಆಗ್ರಹಿಸಿದರು.</p>.<p>ಪಟ್ಟಣದಲ್ಲಿ ಗುರುವಾರ ಕೇಂದ್ರ ಸರ್ಕಾರದ ಸಿಎಎ ಮತ್ತು ಎನ್ಆರ್ಸಿ ಕಾಯ್ದೆ ವಿರೋಧಿಸಿ ಮುಸ್ಲಿಂ ಸಂಘಟನೆ ಗಳ ಒಕ್ಕೂಟ ಹಮ್ಮಿಕೊಂಡಿದ್ದ ಪ್ರತಿ ಭಟನಾ ರ್ಯಾಲಿಯಲ್ಲಿ ಮಾತನಾಡಿದರು.</p>.<p>‘ಸ್ವಾತಂತ್ರ್ಯಕ್ಕಾಗಿ ಮುಸ್ಲಿಮರು ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡಿದ್ದಾರೆ. 30 ಸಾವಿರಕ್ಕೂ ಹೆಚ್ಚು ಮುಸ್ಲಿಮರು ಹುತಾತ್ಮರಾಗಿದ್ದಾರೆ. ಸ್ವಾತಂತ್ರ್ಯ ಹೋರಾಟದ ಚರಿತ್ರೆ ಗೊತ್ತಿಲ್ಲದ ಮೋದಿ, ಅಮಿತ್ ಶಾ ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವ, ಓಟಿಗಾಗಿ ವೈಷಮ್ಯ ಬಿತ್ತುತ್ತಿದ್ದಾರೆ ಎಂದು ಕಿಡಿ ಕಾರಿದರು.</p>.<p>ಅಸ್ಸಾಂನಂಥ ಚಿಕ್ಕ ರಾಜ್ಯದಲ್ಲಿ 19 ಲಕ್ಷ ಜನರಿಗೆ ಪೌರತ್ವ ನೋಂದಣಿ ದಾಖಲೆ ಕೊಡಲು ಸಾಧ್ಯವಾಗಿಲ್ಲ. ಇದರಲ್ಲಿ ಮುಸ್ಲಿಮರು 4 ಲಕ್ಷ ಇದ್ದರೆ, 15 ಲಕ್ಷ ಜನ ಮುಸ್ಲಿಮೇತರರು ಇದ್ದಾರೆ. ಚಿಕ್ಕ ರಾಜ್ಯದ ನೋಂದಣಿ ಪ್ರಕ್ರಿಯೆಗೆ ₹1600 ಕೋಟಿ ಖರ್ಚಾಗಿದೆ. ಇಡೀ ದೇಶದ ನೋಂದಣಿಗೆ ₹55 ಸಾವಿರ ಕೋಟಿ ಬೇಕು. ದೇಶ ಆರ್ಥಿಕ ಸಂಕಷ್ಟದಲ್ಲಿರುವಾಗ ಇಷ್ಟೊಂದು ಹಣ ಖರ್ಚು ಮಾಡುವ ಈ ಕಾಯ್ದೆ ಯಾವ ಪುರುಷಾರ್ಥಕ್ಕೆ ಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ:</strong> ದೇಶದ ಮೂಲ ನಿವಾಸಿಗಳನ್ನು ಜನಾಂಗೀಯ ಆಧಾರದಲ್ಲಿ ವಿಭಜಿಸುವ ಸಂವಿಧಾನ ವಿರೋಧಿ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು ಎಂದು ಮಾಜಿ ಶಾಸಕ ಶಿರಾಜ್ ಶೇಖ್ ಆಗ್ರಹಿಸಿದರು.</p>.<p>ಪಟ್ಟಣದಲ್ಲಿ ಗುರುವಾರ ಕೇಂದ್ರ ಸರ್ಕಾರದ ಸಿಎಎ ಮತ್ತು ಎನ್ಆರ್ಸಿ ಕಾಯ್ದೆ ವಿರೋಧಿಸಿ ಮುಸ್ಲಿಂ ಸಂಘಟನೆ ಗಳ ಒಕ್ಕೂಟ ಹಮ್ಮಿಕೊಂಡಿದ್ದ ಪ್ರತಿ ಭಟನಾ ರ್ಯಾಲಿಯಲ್ಲಿ ಮಾತನಾಡಿದರು.</p>.<p>‘ಸ್ವಾತಂತ್ರ್ಯಕ್ಕಾಗಿ ಮುಸ್ಲಿಮರು ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡಿದ್ದಾರೆ. 30 ಸಾವಿರಕ್ಕೂ ಹೆಚ್ಚು ಮುಸ್ಲಿಮರು ಹುತಾತ್ಮರಾಗಿದ್ದಾರೆ. ಸ್ವಾತಂತ್ರ್ಯ ಹೋರಾಟದ ಚರಿತ್ರೆ ಗೊತ್ತಿಲ್ಲದ ಮೋದಿ, ಅಮಿತ್ ಶಾ ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವ, ಓಟಿಗಾಗಿ ವೈಷಮ್ಯ ಬಿತ್ತುತ್ತಿದ್ದಾರೆ ಎಂದು ಕಿಡಿ ಕಾರಿದರು.</p>.<p>ಅಸ್ಸಾಂನಂಥ ಚಿಕ್ಕ ರಾಜ್ಯದಲ್ಲಿ 19 ಲಕ್ಷ ಜನರಿಗೆ ಪೌರತ್ವ ನೋಂದಣಿ ದಾಖಲೆ ಕೊಡಲು ಸಾಧ್ಯವಾಗಿಲ್ಲ. ಇದರಲ್ಲಿ ಮುಸ್ಲಿಮರು 4 ಲಕ್ಷ ಇದ್ದರೆ, 15 ಲಕ್ಷ ಜನ ಮುಸ್ಲಿಮೇತರರು ಇದ್ದಾರೆ. ಚಿಕ್ಕ ರಾಜ್ಯದ ನೋಂದಣಿ ಪ್ರಕ್ರಿಯೆಗೆ ₹1600 ಕೋಟಿ ಖರ್ಚಾಗಿದೆ. ಇಡೀ ದೇಶದ ನೋಂದಣಿಗೆ ₹55 ಸಾವಿರ ಕೋಟಿ ಬೇಕು. ದೇಶ ಆರ್ಥಿಕ ಸಂಕಷ್ಟದಲ್ಲಿರುವಾಗ ಇಷ್ಟೊಂದು ಹಣ ಖರ್ಚು ಮಾಡುವ ಈ ಕಾಯ್ದೆ ಯಾವ ಪುರುಷಾರ್ಥಕ್ಕೆ ಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>