ಮೈಸೂರಿನಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರೆ, ಚಾಮರಾಜನಗರ, ಬಳ್ಳಾರಿ, ಬೀದರ್, ಬಸವಕಲ್ಯಾಣ ಹಾಗೂ ಹುಮನಾಬಾದ್, ಕಲಬುರ್ಗಿ ಜಿಲ್ಲೆಯ ಚಿಂಚೋಳಿ, ಸೇಡಂ ಮತ್ತು ಜೇವರ್ಗಿ, ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ, ಭಟ್ಕಳ, ಹಾವೇರಿ ಜಿಲ್ಲೆಯ ಸವಣೂರಿನಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಚಿಂಚೋಳಿಯಲ್ಲಿ ಬಂದ್ ಆಚರಿಸಲಾಯಿತು.