ಸಂಘದ ಪದಾಧಿಕಾರಿಗಳ ಜೊತೆ ಗುರುವಾರ ಮಾತುಕತೆ ನಡೆಸಿದ ಮುಖ್ಯ ಮಂತ್ರಿ, ಶುಕ್ರವಾರದಿಂದಲೇ ಸಿಬ್ಬಂದಿ ಮರಳಿ ಕೆಲಸಕ್ಕೆ ಹಾಜರಾಗಬಹುದು. ಬೇಡಿಕೆಗಳ ಬಗ್ಗೆ ತಕ್ಷಣ ಪರಿಹಾರ ಕಂಡುಕೊಳ್ಳುವುದು ಅಸಾಧ್ಯ. ನೂತನ ಸಚಿವರಿಗೆ ಇನ್ನೂ ಖಾತೆ ಹಂಚಿಕೆ ಆಗಿಲ್ಲ. ಅಲ್ಲದೆ, ಆರ್ಥಿಕ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಿದ ಬಳಿಕವೇ ಈ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಮನವರಿಕೆ ಮಾಡಿದರು. ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಮುಖ್ಯಮಂತ್ರಿ ಪರವಾಗಿ ಧರಣಿ ನಿರತರನ್ನು ಗುರುವಾರ ಸಂಜೆ ಭೇಟಿ ಮಾಡಿ ಮನವಿ ಸ್ವೀಕರಿಸಿದರು.