ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಪ್ರವೇಶಿಸಿ, ‘ಗೃಹ ಸಚಿವರು ಉತ್ತರ ಕೊಡುತ್ತಾರೆ. ಬಿಜೆಪಿ ಸದಸ್ಯರು ನಿಯಮ ಮೀರಿ ವರ್ತಿಸುತ್ತಿದ್ದಾರೆ. ಅದಕ್ಕೆ ಅವಕಾಶ ಕೊಡಬಾರದು. ನಾವು ಉತ್ತರ ಕೊಡದೇ ತಪ್ಪಿಸಿಕೊಂಡು ಹೋಗುವುದಿಲ್ಲ’ ಎಂದು ಹೇಳಿದರು. ಇದಕ್ಕೂ ಬಿಜೆಪಿ ಸದಸ್ಯರು ಮಣಿಯದಿದ್ದಾಗ ಸಭಾಧ್ಯಕ್ಷರು, ಇದೇ ವರ್ತನೆ ಮುಂದುವರಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಬಳಿಕ ಕಲಾಪವನ್ನು ಮುಂದೂಡಿದರು. ಬಿಜೆಪಿ ನಾಯಕರನ್ನು ತಮ್ಮ ಕೊಠಡಿಗೆ ಕರೆಸಿಕೊಂಡು ಮಾತುಕತೆ ನಡೆಸಿ ಧರಣಿಗೆ ತೆರೆ ಎಳೆಯಲು ಮನವೊಲಿಸುವಲ್ಲಿ ಯಶಸ್ವಿಯಾದರು.