ತನಿಖೆಯಿಂದ ಸತ್ಯಾಸತ್ಯತೆ ಗೊತ್ತಾಗಲಿದೆ: ‘ಕಲಬುರಗಿಯಲ್ಲಿ ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಮಾಡಿದ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಎಲ್ಲವನ್ನು ಪರಿಶೀಲನೆ ನಡೆಸಲಾಗುವುದು. ಕೃತ್ಯದ ಉದ್ದೇಶ ಏನೆಂಬುವುದು ತನಿಖೆಯಿಂದ ಹೊರಬರಬೇಕಿದೆ. ಯಾರದ್ದಾದರೂ ಕುಮ್ಮಕ್ಕು ಇದೆಯಾ ಎಂಬುದೂ ತನಿಖೆಯಿಂದ ಗೊತ್ತಾಗಲಿದೆ’ ಎಂದರು.