ಬೆಂಗಳೂರು: ಮೇ 8ರಂದು ನಿಗದಿ ಮಾಡಿದ್ದ ಪಿಎಸ್ಐ ಲಿಖಿತ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಂದೂಡಿದೆ.
ಲೋಕಸಭಾ ಚುನಾವಣೆ ಕಾರಣಕ್ಕೆ ಮುಂದೂಡಲಾಗಿದೆ. ಪರಿಷ್ಕೃತ ದಿನಾಂಕವನ್ನು ಚುನಾವಣೆ ಮುಗಿದ ಬಳಿಕ ಪ್ರಕಟಿಸಲಾಗುವುದು ಎಂದು ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಹೇಳಿದ್ದಾರೆ.
402 ಪೊಲೀಸ್ ಸಬ್ಇನ್ಸ್ಪೆಕ್ಟರ್ (ಪಿಎಸ್ಐ) ಹುದ್ದೆಗಳ ನೇರ ನೇಮಕಾತಿಗೆ ಮೇ 8ರಂದು ಲಿಖಿತ ಪರೀಕ್ಷೆ ನಿಗದಿಯಾಗಿತ್ತು. ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ ಅರ್ಹತೆ ಹೊಂದಿದವರಿಗೆ ಲಿಖಿತ ಪರೀಕ್ಷೆಗೆ ಅವಕಾಶ ನೀಡಲು ಕೆಇಎ ಪ್ರಕಟಣೆ ಹೊರಡಿಸಿತ್ತು.