ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಡಿ.ಕೆ.ಶಿವಕುಮಾರ್ ನಡೆಸುತ್ತಿರುವ ಪ್ರತಿಯೊಂದು ಷಡ್ಯಂತ್ರಕ್ಕೂ ಈಗ ದಾಖಲೆ ಲಭಿಸುತ್ತಿದೆ. ಕಾಂಗ್ರೆಸ್ ಟೂಲ್ ಕಿಟ್ ಷಡ್ಯಂತ್ರಕ್ಕೆ ಕೆಪಿಸಿಸಿ ಅಧ್ಯಕ್ಷರ ಸದಾಶಿವನಗರದ ಬಂಗಲೆಯೇ ಪ್ರಮುಖ ಅಡ್ಡಾವಾಗಿದೆ. ಸಿಡಿ ವಿವಾದ, ಹಿಜಾಬ್ ಸಂಘರ್ಷ, 40 ಪರ್ಸೆಂಟ್ ಕಮಿಷನ್, ಹರ್ಷ ಕೊಲೆ,ಹುಬ್ಬಳ್ಳಿ ಗಲಭೆ, ಪಿಎಸ್ಐ ನೇಮಕ ಹಗರಣ ಎಲ್ಲದಕ್ಕೂ ಸೂತ್ರಧಾರ ಒಬ್ಬರೇ, ಅದು ಡಿ.ಕೆ.ಶಿವಕುಮಾರ್ ಎಂದು ಬಿಜೆಪಿ ಆರೋಪಿಸಿದೆ.