ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಬಂಧನಕ್ಕೆ ಒಳಗಾಗಿ ಸಿಐಡಿ ವಶದಲ್ಲಿದ್ದ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಅಮೃತ್ ಪೌಲ್ ಅವರನ್ನು 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಬುಧವಾರ ಹಾಜರು ಪಡಿಸಲಾಯಿತು.
ನ್ಯಾಯಾಲಯವು ಮತ್ತೆ ಮೂರು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ ಆದೇಶಿಸಿತು.
ಆರೋಪಿ ಶಾಂತಕುಮಾರ ಹಾಗೂ ಎಡಿಜಿಪಿ ಮಧ್ಯೆ ₹ 1.36 ಕೋಟಿ ಹಣ ವರ್ಗಾವಣೆ ಆಗಿದೆ. ಮೊಬೈಲ್ ದತ್ತಾಂಶ ಅಳಿಸಿ ಹಾಕಲಾಗಿದೆ. ಇನ್ನೂ ಐದು ದಿನ ವಶಕ್ಕೆ ನೀಡುವಂತೆ ಸಿಐಡಿ ಪರ ವಕೀಲರು ಕೋರಿದರು.
ನ್ಯಾಯಾಲಯವು ಮೂರು ದಿನ ವಶಕ್ಕೆ ನೀಡಿ ಆದೇಶಿಸಿತು. ಕುಟುಂಬದವರ ಭೇಟಿ ಹಾಗೂ ವೈದ್ಯಕೀಯ ತಪಾಸಣೆಗೂ ಅವಕಾಶ ಕಲ್ಪಿಸಿತು.