<p><strong>ಬೆಂಗಳೂರು</strong>: ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿದ್ದವರ ಪೈಕಿ ನಾಲ್ವರು ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ತೆರವು ಮಾಡಲಾಗಿದೆ.</p>.<p>ಡಿವೈಎಸ್ಪಿಯಾಗಿದ್ದ ಶಾಂತಕುಮಾರ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿಗಳ ವಿರುದ್ದ ಇಲಾಖಾ ವಿಚಾರಣೆ ಬಾಕಿ ಇರಿಸಿ ಅಮಾನತು ತೆರವು ಮಾಡಿ, ಗೃಹ ಇಲಾಖೆ ಜೂನ್ 13ರಂದು ಆದೇಶ ಹೊರಡಿಸಿದೆ. </p>.<p>ಮಲ್ಲಿಕಾರ್ಜುನ ಸಾಲಿ (ಡಿವೈಎಸ್ಪಿ) ಶಾಂತಕುಮಾರ್ (ಡಿವೈಎಸ್ಪಿ, ಸಶಸ್ತ್ರ), ವೈಜ್ಯನಾಥ ಕಲ್ಯಾಣಿ ರೇವೂರ (ಸಹಾಯಕ ಕಮಾಂಡೆಂಟ್), ಆನಂದ ಮೇತ್ರಿ (ಇನ್ಸ್ಪೆಕ್ಟರ್) ಅವರ ಅಮಾನತು ಆದೇಶ ತೆರವು ಮಾಡಲಾಗಿದೆ.</p>.<p>ನಾಲ್ವರನ್ನು ಐಎಸ್ಡಿ, ಪಿಟಿಎಸ್, ಕೆಎಸ್ಆರ್ಪಿಯ ಏಳನೇ ಪಡೆ ಹಾಗೂ ಎಫ್ಪಿಬಿಗೆ ವರ್ಗಾವಣೆ ಮಾಡಲಾಗಿದೆ.</p>.<p>ಪಿಎಸ್ಐ ನೇಮಕಾತಿ ಹಗರಣದ ತನಿಖೆಯನ್ನು ಹಿಂದಿನ ಬಿಜೆಪಿ ಸರ್ಕಾರವು ಸಿಐಡಿಗೆ ವಹಿಸಿತ್ತು. ಮಲ್ಲಿಕಾರ್ಜುನ ಸಾಲಿ, ಶಾಂತಕುಮಾರ್, ವೈಜ್ಯನಾಥ ಕಲ್ಯಾಣಿ ರೇವೂರ ಹಾಗೂ ಆನಂದ ಮೇತ್ರಿ ಕರ್ತವ್ಯ ಲೋಪ ಎಸಗಿದ್ದು, ಸಾಬೀತಾಗಿತ್ತು. ಅವರನ್ನು ಹಿಂದಿನ ಸರ್ಕಾರ ಕೆಲಸದಿಂದ ಅಮಾನತು ಮಾಡಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿದ್ದವರ ಪೈಕಿ ನಾಲ್ವರು ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ತೆರವು ಮಾಡಲಾಗಿದೆ.</p>.<p>ಡಿವೈಎಸ್ಪಿಯಾಗಿದ್ದ ಶಾಂತಕುಮಾರ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿಗಳ ವಿರುದ್ದ ಇಲಾಖಾ ವಿಚಾರಣೆ ಬಾಕಿ ಇರಿಸಿ ಅಮಾನತು ತೆರವು ಮಾಡಿ, ಗೃಹ ಇಲಾಖೆ ಜೂನ್ 13ರಂದು ಆದೇಶ ಹೊರಡಿಸಿದೆ. </p>.<p>ಮಲ್ಲಿಕಾರ್ಜುನ ಸಾಲಿ (ಡಿವೈಎಸ್ಪಿ) ಶಾಂತಕುಮಾರ್ (ಡಿವೈಎಸ್ಪಿ, ಸಶಸ್ತ್ರ), ವೈಜ್ಯನಾಥ ಕಲ್ಯಾಣಿ ರೇವೂರ (ಸಹಾಯಕ ಕಮಾಂಡೆಂಟ್), ಆನಂದ ಮೇತ್ರಿ (ಇನ್ಸ್ಪೆಕ್ಟರ್) ಅವರ ಅಮಾನತು ಆದೇಶ ತೆರವು ಮಾಡಲಾಗಿದೆ.</p>.<p>ನಾಲ್ವರನ್ನು ಐಎಸ್ಡಿ, ಪಿಟಿಎಸ್, ಕೆಎಸ್ಆರ್ಪಿಯ ಏಳನೇ ಪಡೆ ಹಾಗೂ ಎಫ್ಪಿಬಿಗೆ ವರ್ಗಾವಣೆ ಮಾಡಲಾಗಿದೆ.</p>.<p>ಪಿಎಸ್ಐ ನೇಮಕಾತಿ ಹಗರಣದ ತನಿಖೆಯನ್ನು ಹಿಂದಿನ ಬಿಜೆಪಿ ಸರ್ಕಾರವು ಸಿಐಡಿಗೆ ವಹಿಸಿತ್ತು. ಮಲ್ಲಿಕಾರ್ಜುನ ಸಾಲಿ, ಶಾಂತಕುಮಾರ್, ವೈಜ್ಯನಾಥ ಕಲ್ಯಾಣಿ ರೇವೂರ ಹಾಗೂ ಆನಂದ ಮೇತ್ರಿ ಕರ್ತವ್ಯ ಲೋಪ ಎಸಗಿದ್ದು, ಸಾಬೀತಾಗಿತ್ತು. ಅವರನ್ನು ಹಿಂದಿನ ಸರ್ಕಾರ ಕೆಲಸದಿಂದ ಅಮಾನತು ಮಾಡಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>