<p><strong>ಕಲಬುರಗಿ: </strong>ಪಿಎಸ್ಐ ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ನಗರದ ಮತ್ತೊಂದು ಪರೀಕ್ಷಾ ಕೇಂದ್ರವಾದ ಎಂ.ಎಸ್. ಇರಾನಿ ಕಾಲೇಜಿನಲ್ಲಿ ಅಕ್ರಮ ನಡೆದಿರುವ ಬಗ್ಗೆ ಸಿಐಡಿ ವಿಚಾರಣೆ ವೇಳೆ ಗೊತ್ತಾಗಿದ್ದು, ಪ್ರಕರಣ ಸಂಬಂಧ ಮೂವರನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ಈ ಸಂಬಂಧ ತನಿಖಾಧಿಕಾರಿ ಪ್ರಕಾಶ ರಾಠೋಡ ಅವರು ಸ್ಟೇಶನ್ ಬಜಾರ್ ಠಾಣೆಗೆ ರುದ್ರಗೌಡ ಡಿ. ಪಾಟೀಲ, ಮಧ್ಯವರ್ತಿ ಚಂದ್ರಕಾಂತ ಕುಲಕರ್ಣಿ, ಅಭ್ಯರ್ಥಿ ಪ್ರಭು, ಆತನ ತಂದೆ ಶರಣಪ್ಪ ಎಂಬುವರ ವಿರುದ್ಧ ದೂರು ನೀಡಿದ್ದರು.</p>.<p>ರುದ್ರಗೌಡ ಈಗಾಗಲೇ ಸಿಐಡಿ ಬಂಧನದಲ್ಲಿದ್ದು, ಪಾಟೀಲ ಅವರ ಲೆಕ್ಕ ಪರಿಶೋಧಕ ಚಂದ್ರಕಾಂತ ಕುಲಕರ್ಣಿ ಅವರನ್ನು ಪೊಲೀಸರು ಸೋಮವಾರ ರಾತ್ರಿ ವಶಕ್ಕೆ ಪಡೆದರು. ಪ್ರಭು ಹಾಗೂ ಶರಣಪ್ಪ ಅವರನ್ನು ಮಂಗಳವಾರ ಬೆಳಿಗ್ಗೆ ವಶಕ್ಕೆ ಪಡೆಯಲಾಗಿದೆ.</p>.<p>ಎಂ.ಎಸ್. ಇರಾನಿ ಕಾಲೇಜಿನ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದ ಪ್ರಭು ಎಂಬುವವರನ್ನು ಸಿಐಡಿ ಅಧಿಕಾರಿಗಳು ಸೋಮವಾರ ಸಂಜೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಪ್ರಭು ಪಿಎಸ್ಐ ನೇಮಕ ಪರೀಕ್ಷೆಯಲ್ಲಿ ಆಯ್ಕೆಯಾಗಿದ್ದರು. ಅಕ್ರಮದ ಮೂಲಕ ಆಯ್ಕೆಯಾಗಲು ₹ 50 ಲಕ್ಷವನ್ನು ರುದ್ರಗೌಡ ಪಾಟೀಲಗೆ ನೀಡಲಾಗಿತ್ತು ಎಂದು ಹೇಳಿಕೆ ನೀಡಿದ್ದರು. ಇದರಲ್ಲಿ ಮಧ್ಯವರ್ತಿಯಾಗಿ ರುದ್ರಗೌಡ ಲೆಕ್ಕಪರಿಶೋಧಕ ಚಂದ್ರಕಾಂತ ಕುಲಕರ್ಣಿ ಕೆಲಸ ಮಾಡಿದ್ದರು ಎಂದು ತನಿಖೆ ವೇಳೆ ಬಹಿರಂಗವಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>ಇದರೊಂದಿಗೆ ಕಲಬುರಗಿಯ ಎರಡು ಕೇಂದ್ರಗಳಲ್ಲಿ ಅಕ್ರಮ ನಡೆದಿರುವುದು ಬಹಿರಂಗವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ: </strong>ಪಿಎಸ್ಐ ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ನಗರದ ಮತ್ತೊಂದು ಪರೀಕ್ಷಾ ಕೇಂದ್ರವಾದ ಎಂ.ಎಸ್. ಇರಾನಿ ಕಾಲೇಜಿನಲ್ಲಿ ಅಕ್ರಮ ನಡೆದಿರುವ ಬಗ್ಗೆ ಸಿಐಡಿ ವಿಚಾರಣೆ ವೇಳೆ ಗೊತ್ತಾಗಿದ್ದು, ಪ್ರಕರಣ ಸಂಬಂಧ ಮೂವರನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ಈ ಸಂಬಂಧ ತನಿಖಾಧಿಕಾರಿ ಪ್ರಕಾಶ ರಾಠೋಡ ಅವರು ಸ್ಟೇಶನ್ ಬಜಾರ್ ಠಾಣೆಗೆ ರುದ್ರಗೌಡ ಡಿ. ಪಾಟೀಲ, ಮಧ್ಯವರ್ತಿ ಚಂದ್ರಕಾಂತ ಕುಲಕರ್ಣಿ, ಅಭ್ಯರ್ಥಿ ಪ್ರಭು, ಆತನ ತಂದೆ ಶರಣಪ್ಪ ಎಂಬುವರ ವಿರುದ್ಧ ದೂರು ನೀಡಿದ್ದರು.</p>.<p>ರುದ್ರಗೌಡ ಈಗಾಗಲೇ ಸಿಐಡಿ ಬಂಧನದಲ್ಲಿದ್ದು, ಪಾಟೀಲ ಅವರ ಲೆಕ್ಕ ಪರಿಶೋಧಕ ಚಂದ್ರಕಾಂತ ಕುಲಕರ್ಣಿ ಅವರನ್ನು ಪೊಲೀಸರು ಸೋಮವಾರ ರಾತ್ರಿ ವಶಕ್ಕೆ ಪಡೆದರು. ಪ್ರಭು ಹಾಗೂ ಶರಣಪ್ಪ ಅವರನ್ನು ಮಂಗಳವಾರ ಬೆಳಿಗ್ಗೆ ವಶಕ್ಕೆ ಪಡೆಯಲಾಗಿದೆ.</p>.<p>ಎಂ.ಎಸ್. ಇರಾನಿ ಕಾಲೇಜಿನ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದ ಪ್ರಭು ಎಂಬುವವರನ್ನು ಸಿಐಡಿ ಅಧಿಕಾರಿಗಳು ಸೋಮವಾರ ಸಂಜೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಪ್ರಭು ಪಿಎಸ್ಐ ನೇಮಕ ಪರೀಕ್ಷೆಯಲ್ಲಿ ಆಯ್ಕೆಯಾಗಿದ್ದರು. ಅಕ್ರಮದ ಮೂಲಕ ಆಯ್ಕೆಯಾಗಲು ₹ 50 ಲಕ್ಷವನ್ನು ರುದ್ರಗೌಡ ಪಾಟೀಲಗೆ ನೀಡಲಾಗಿತ್ತು ಎಂದು ಹೇಳಿಕೆ ನೀಡಿದ್ದರು. ಇದರಲ್ಲಿ ಮಧ್ಯವರ್ತಿಯಾಗಿ ರುದ್ರಗೌಡ ಲೆಕ್ಕಪರಿಶೋಧಕ ಚಂದ್ರಕಾಂತ ಕುಲಕರ್ಣಿ ಕೆಲಸ ಮಾಡಿದ್ದರು ಎಂದು ತನಿಖೆ ವೇಳೆ ಬಹಿರಂಗವಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>ಇದರೊಂದಿಗೆ ಕಲಬುರಗಿಯ ಎರಡು ಕೇಂದ್ರಗಳಲ್ಲಿ ಅಕ್ರಮ ನಡೆದಿರುವುದು ಬಹಿರಂಗವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>