<p><strong>ಕೊಪ್ಪಳ:</strong> ಪಿಎಸ್ಐ ನೇಮಕಾತಿಯಲ್ಲಿ ಹಗರಣ ಆಗಿದ್ದರಿಂದ ಹಿಂದಿನ ಐದು ವರ್ಷಗಳಲ್ಲಿ ಪೊಲೀಸರ ನೇಮಕಾತಿ ಸಾಧ್ಯವಾಗಿಲ್ಲ. ಶೀಘ್ರದಲ್ಲಿಯೇ ಇನ್ ಸ್ಪೆಕ್ಟರ್ ಹಾಗೂ ಕಾನ್ ಸ್ಟೇಬಲ್ ಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.</p><p>ನಗರದಲ್ಲಿ ಭಾನುವಾರ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯದ ಬಡ ಜನ ಈಗ ಮಧ್ಯಮ ವರ್ಗಕ್ಕೆ ಬಂದಿದ್ದಾರೆ. ಗ್ಯಾರಂಟಿ ಜೊತೆಗೆ ಅಭಿವೃದ್ಧಿ ಕಾಮಗಾರಿಗಳಿಗೂ ಅನುದಾನ ನೀಡಲಾಗುತ್ತಿದೆ ಎಂದರು.</p><p>ಬಿ.ಆರ್. ಪಾಟೀಲ ಅವರ ಆಡಿಯೊ ವಿಚಾರ ಕುರಿತು ಕೇಳಲಾದ ಪ್ರಶ್ನೆಗೆ 'ಅವರು ಮಾಡಿರುವುದು ಗಂಭೀರ ಆರೋಪ ಅಲ್ಲ. ಸಂಬಂಧಿಸಿದ ಸಚಿವರ ಜೊತೆ ಮಾತನಾಡುವಂತೆ ಅವರಿಗೆ ಹೇಳಿದ್ದೇನೆ. ಪೊಲೀಸರಿಗೆ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದರು.</p><p>ಗಣಿ ಅಕ್ರಮದ ಕುರಿತು ಸಚಿವ ಎಚ್.ಕೆ. ಪಾಟೀಲ ಬರೆದ ಪತ್ರದ ಬಗ್ಗೆ ಪ್ರತಿಕ್ರಿಯಿಸಿ ಲೂಟಿ ಮಾಡಿದ ಹಣ ಮುಟ್ಟುಗೋಲು ಹಾಕಿಕೊಳ್ಳುವಂತೆ ಸಚಿವರು ಸಲಹೆ ನೀಡಿದ್ದಾರೆ. ಈ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ಪಿಎಸ್ಐ ನೇಮಕಾತಿಯಲ್ಲಿ ಹಗರಣ ಆಗಿದ್ದರಿಂದ ಹಿಂದಿನ ಐದು ವರ್ಷಗಳಲ್ಲಿ ಪೊಲೀಸರ ನೇಮಕಾತಿ ಸಾಧ್ಯವಾಗಿಲ್ಲ. ಶೀಘ್ರದಲ್ಲಿಯೇ ಇನ್ ಸ್ಪೆಕ್ಟರ್ ಹಾಗೂ ಕಾನ್ ಸ್ಟೇಬಲ್ ಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.</p><p>ನಗರದಲ್ಲಿ ಭಾನುವಾರ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯದ ಬಡ ಜನ ಈಗ ಮಧ್ಯಮ ವರ್ಗಕ್ಕೆ ಬಂದಿದ್ದಾರೆ. ಗ್ಯಾರಂಟಿ ಜೊತೆಗೆ ಅಭಿವೃದ್ಧಿ ಕಾಮಗಾರಿಗಳಿಗೂ ಅನುದಾನ ನೀಡಲಾಗುತ್ತಿದೆ ಎಂದರು.</p><p>ಬಿ.ಆರ್. ಪಾಟೀಲ ಅವರ ಆಡಿಯೊ ವಿಚಾರ ಕುರಿತು ಕೇಳಲಾದ ಪ್ರಶ್ನೆಗೆ 'ಅವರು ಮಾಡಿರುವುದು ಗಂಭೀರ ಆರೋಪ ಅಲ್ಲ. ಸಂಬಂಧಿಸಿದ ಸಚಿವರ ಜೊತೆ ಮಾತನಾಡುವಂತೆ ಅವರಿಗೆ ಹೇಳಿದ್ದೇನೆ. ಪೊಲೀಸರಿಗೆ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದರು.</p><p>ಗಣಿ ಅಕ್ರಮದ ಕುರಿತು ಸಚಿವ ಎಚ್.ಕೆ. ಪಾಟೀಲ ಬರೆದ ಪತ್ರದ ಬಗ್ಗೆ ಪ್ರತಿಕ್ರಿಯಿಸಿ ಲೂಟಿ ಮಾಡಿದ ಹಣ ಮುಟ್ಟುಗೋಲು ಹಾಕಿಕೊಳ್ಳುವಂತೆ ಸಚಿವರು ಸಲಹೆ ನೀಡಿದ್ದಾರೆ. ಈ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>