ರಾಯಚೂರು:ಮುಖ್ಯಮಂತ್ರಿ ಗ್ರಾಮವಾಸ್ತವ್ಯಕ್ಕಾಗಿ ಬಂದಿದ್ದ ಸಂದರ್ಭದಲ್ಲಿ ಭದ್ರತಾ ಲೋಪ ಕಾರಣಕ್ಕಾಗಿ ರಾಯಚೂರು ಗ್ರಾಮೀಣ ಠಾಣೆಯ ಪಿಎಸ್ಐ ನಿಂಗಪ್ಪ ಅವರನ್ನು ಅಮಾನತುಗೊಳಿಸಿದ್ದ ಆದೇಶವನ್ನು ರದ್ದುಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ವೇದಮೂರ್ತಿ ತಿಳಿಸಿದ್ದಾರೆ.
ಅಮಾನತು ಆದೇಶ ರದ್ದುಪಡಿಸಿ, ಅವರನ್ನು ರಾಯಚೂರಿನ ಡಿಸಿಆರ್ಬಿ ವಿಭಾಗಕ್ಕೆ ವರ್ಗಾಯಿಸಲಾಗಿದೆ.