ಅವರ ಕುಟುಂಬ ಮೈಸೂರಿನಲ್ಲೇ ಇತ್ತು. ವರ್ಗಾವಣೆ ಸಿಕ್ಕಿರಲಿಲ್ಲ. ತೀವ್ರತರವಾದ ಕೌಟುಂಬಿಕ ಹಾಗೂ ವೈಯಕ್ತಿಕ ಕಾರಣ ನೀಡಿದ್ದ ರಮೇಶ್, ತಮ್ಮನ್ನು ಪಿಎಸ್ಐ ಹುದ್ದೆಯಿಂದ ಬಿಡುಗಡೆ ಮಾಡಿ ಮಾತೃ ಸ್ಥಾನವಾದ ಮೈಸೂರಿನಲ್ಲಿ ಹೆಡ್ ಕಾನ್ಸ್ಟೆಬಲ್ ಹುದ್ದೆಗೆ ನಿಯುಕ್ತಿಗೊಳಿಸಬೇಕೆಂದು ಕೋರಿ ನಗರ ಪೊಲೀಸ್ ಕಮಿಷನರ್ ಅವರಿಗೆ ಅರ್ಜಿ ಸಲ್ಲಿಸಿದ್ದರು.