ರಾಜ್ಯ ಸರ್ಕಾರದ ವಿರುದ್ಧ ಮುನ್ನಯ್ಯ ಮತ್ತು ಇತರರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಪಿಟಿಸಿಎಲ್ ಕಾಯ್ದೆಯ ವ್ಯಾಪ್ತಿಯಲ್ಲಿರುವ ಜಮೀನುಗಳನ್ನು ಪರಭಾರೆ ಮಾಡಲು ಮುಕ್ತ ಅವಕಾಶ ನೀಡಿದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರು ಭೂರಹಿತರಾಗಲು ಕಾರಣವಾಗುತ್ತದೆ ಎಂದು ಹೇಳಿತ್ತು. ರಾಜ್ಯ ಸರ್ಕಾರದ ಪೂರ್ವಾನುಮತಿ ಪಡೆಯದೇ ಇಂತಹ ಜಮೀನುಗಳನ್ನು ಭೂಪರಿವರ್ತನೆ ಮಾಡುವಂತಿಲ್ಲ ಎಂದು 2021ರ ಜುಲೈ 5ರಂದು ಆದೇಶ ಹೊರಡಿಸಿತ್ತು.