<p><strong>ಬೆಂಗಳೂರು:</strong> ರಾಜ್ಯದ ವಿವಿಧ ಪದವಿ ಪೂರ್ವ ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ ಮತ್ತು ಶೌಚಾಲಯಗಳ ನಿರ್ಮಾಣ ಹಾಗೂ ಕೊಠಡಿಗಳ ದುರಸ್ತಿಗೆ ₹94.38 ಕೋಟಿ ವೆಚ್ಚದ ಕ್ರಿಯಾ ಯೋಜನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.</p>.<p>ಹೆಚ್ಚುವರಿ ಕೊಠಡಿ ಮತ್ತು ಶೌಚಾಲಯಗಳ ನಿರ್ಮಾಣ ಹಾಗೂ ದುರಸ್ತಿಗೆ ಹಣಕಾಸು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025–26ನೇ ಸಾಲಿನ ಬಜೆಟ್ನಲ್ಲಿ ಘೋಷಿಸಿದ್ದರು. ಅದರಂತೆ ಕ್ರಿಯಾಯೋಜನೆ ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಗೆ (ಪದವಿ ಪೂರ್ವ) ಸೂಚಿಸಲಾಗಿತ್ತು. </p>.<p>116 ಕಾಲೇಜುಗಳಲ್ಲಿ 268 ಕೊಠಡಿಗಳು ಮತ್ತು 123 ಶೌಚಾಲಯಗಳ ನಿರ್ಮಾಣ, 93 ಕಾಲೇಜುಗಳ 264 ಕೊಠಡಿಗಳ ದುರಸ್ತಿಗೆ ₹94.38 ಕೋಟಿ ವೆಚ್ಚದ ಕ್ರಿಯಾಯೋಜನೆಯನ್ನು ಸಿದ್ಧಪಡಿಸಿ, ಸಲ್ಲಿಸಲಾಗಿತ್ತು. ಪರಿಶಿಷ್ಟ ಜಾತಿಗಳ ಉಪಯೋಜನೆ ಅಡಿಯಲ್ಲಿ ₹19.74 ಕೋಟಿ, ಪರಿಶಿಷ್ಟ ಪಂಗಡಗಳ ಉಪಯೋಜನೆ ಅಡಿಯಲ್ಲಿ ₹7.99 ಕೋಟಿ ಹಾಗೂ ಸಾಮಾನ್ಯ ಅನುದಾನದಲ್ಲಿ ₹66.66 ಕೋಟಿ ಬಳಸಿಕೊಳ್ಳಬಹುದು ಎಂದು ವಿವರಿಸಿತ್ತು.</p>.<p>ಈ ಕ್ರಿಯಾ ಯೋಜನೆಗೆ ಸರ್ಕಾರವು ಅನುಮೊದನೆ ನೀಡಿ, ಆದೇಶಿಸಿದೆ. ಹೊಸ ಕೊಠಡಿಗಳ ನಿರ್ಮಾಣಕ್ಕೆ ₹76 ಕೋಟಿ, ಶೌಚಾಲಯಗಳ ನಿರ್ಮಾಣಕ್ಕೆ ₹12.6 ಕೋಟಿ ಮತ್ತು ಕೊಠಡಿಗಳ ದುರಸ್ತಿಗೆ ₹52 ಲಕ್ಷ ನಿಗದಿಪಡಿಸಿದೆ. ಈ ಆರ್ಥಿಕ ವರ್ಷದ ಅಂತ್ಯದ ವೇಳೆಗೆ ಕಾಮಗಾರಿಗಳನ್ನು ಅನುಷ್ಠಾನಕ್ಕೆ ತರುವಂತೆ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದ ವಿವಿಧ ಪದವಿ ಪೂರ್ವ ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ ಮತ್ತು ಶೌಚಾಲಯಗಳ ನಿರ್ಮಾಣ ಹಾಗೂ ಕೊಠಡಿಗಳ ದುರಸ್ತಿಗೆ ₹94.38 ಕೋಟಿ ವೆಚ್ಚದ ಕ್ರಿಯಾ ಯೋಜನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.</p>.<p>ಹೆಚ್ಚುವರಿ ಕೊಠಡಿ ಮತ್ತು ಶೌಚಾಲಯಗಳ ನಿರ್ಮಾಣ ಹಾಗೂ ದುರಸ್ತಿಗೆ ಹಣಕಾಸು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025–26ನೇ ಸಾಲಿನ ಬಜೆಟ್ನಲ್ಲಿ ಘೋಷಿಸಿದ್ದರು. ಅದರಂತೆ ಕ್ರಿಯಾಯೋಜನೆ ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಗೆ (ಪದವಿ ಪೂರ್ವ) ಸೂಚಿಸಲಾಗಿತ್ತು. </p>.<p>116 ಕಾಲೇಜುಗಳಲ್ಲಿ 268 ಕೊಠಡಿಗಳು ಮತ್ತು 123 ಶೌಚಾಲಯಗಳ ನಿರ್ಮಾಣ, 93 ಕಾಲೇಜುಗಳ 264 ಕೊಠಡಿಗಳ ದುರಸ್ತಿಗೆ ₹94.38 ಕೋಟಿ ವೆಚ್ಚದ ಕ್ರಿಯಾಯೋಜನೆಯನ್ನು ಸಿದ್ಧಪಡಿಸಿ, ಸಲ್ಲಿಸಲಾಗಿತ್ತು. ಪರಿಶಿಷ್ಟ ಜಾತಿಗಳ ಉಪಯೋಜನೆ ಅಡಿಯಲ್ಲಿ ₹19.74 ಕೋಟಿ, ಪರಿಶಿಷ್ಟ ಪಂಗಡಗಳ ಉಪಯೋಜನೆ ಅಡಿಯಲ್ಲಿ ₹7.99 ಕೋಟಿ ಹಾಗೂ ಸಾಮಾನ್ಯ ಅನುದಾನದಲ್ಲಿ ₹66.66 ಕೋಟಿ ಬಳಸಿಕೊಳ್ಳಬಹುದು ಎಂದು ವಿವರಿಸಿತ್ತು.</p>.<p>ಈ ಕ್ರಿಯಾ ಯೋಜನೆಗೆ ಸರ್ಕಾರವು ಅನುಮೊದನೆ ನೀಡಿ, ಆದೇಶಿಸಿದೆ. ಹೊಸ ಕೊಠಡಿಗಳ ನಿರ್ಮಾಣಕ್ಕೆ ₹76 ಕೋಟಿ, ಶೌಚಾಲಯಗಳ ನಿರ್ಮಾಣಕ್ಕೆ ₹12.6 ಕೋಟಿ ಮತ್ತು ಕೊಠಡಿಗಳ ದುರಸ್ತಿಗೆ ₹52 ಲಕ್ಷ ನಿಗದಿಪಡಿಸಿದೆ. ಈ ಆರ್ಥಿಕ ವರ್ಷದ ಅಂತ್ಯದ ವೇಳೆಗೆ ಕಾಮಗಾರಿಗಳನ್ನು ಅನುಷ್ಠಾನಕ್ಕೆ ತರುವಂತೆ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>