<p><strong>ಬೆಂಗಳೂರು</strong>: ಜನಗಣತಿ ಕಾರ್ಯದಿಂದ ವಿನಾಯಿತಿ ನೀಡುವಂತೆ ಪದವಿಪೂರ್ವ ಉಪನ್ಯಾಸಕರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. </p>.<p>ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿರುವ ಪದವಿಪೂರ್ವ ಉಪನ್ಯಾಸಕರ ಸಂಘದ ಅಧ್ಯಕ್ಷ ಎ.ಎಚ್.ನಿಂಗೇಗೌಡ, ಜನಗಣತಿಗೆ ಸಾವಿರಾರು ಉಪನ್ಯಾಸಕರನ್ನು ನಿಯೋಜಿಸಲಾಗಿದೆ. ಮಾರ್ಚ್ ತಿಂಗಳಲ್ಲೇ ಮುಖ್ಯ ತರಬೇತುದಾರರಿಗೆ ತರಬೇತಿ ಪೂರ್ಣಗೊಂಡಿದೆ. ಗಣತಿ ಕಾರ್ಯ ನಡೆಸುವವರಿಗೆ ಮೂರು ಹಂತಗಳಲ್ಲಿ ತರಬೇತಿ ನೀಡಲು ಕ್ರಮ ಕೈಗೊಳ್ಳಲಾಗಿದೆ. ಜನಗಣತಿ ಕಾರ್ಯ ಏ.16ರಿಂದ ಮೇ 16ರವರೆಗೆ ನಡೆಯಲಿದ್ದು, ಅಧಿಕೃತ ಜನಗಣತಿ ಫೆ.2027ರಿಂದ ಪ್ರಾರಂಭವಾಗಲಿದೆ. ಆದರೆ, ದ್ವಿತೀಯ ಪಿಯುಗೆ ಮೂರು ಪರೀಕ್ಷೆಗಳು, ಮೌಲ್ಯಮಾಪನ, ಪರಿಹಾರ ಬೋಧನೆ, ಸಿಇಟಿ, ನೀಟ್ ತರಬೇತಿ ಸೇರಿದಂತೆ ಹಲವು ಕೆಲಸಗಳನ್ನು ನಿರ್ವಹಿಸಬೇಕಿರುವ ಕಾರಣ ಜನಗಣತಿ ಕೆಲಸದಿಂದ ವಿನಾಯಿತಿ ನೀಡಬೇಕು ಎಂದಿದ್ದಾರೆ. </p>.<p>ವಾರ್ಷಿಕ ಪರೀಕ್ಷೆಗಳ ಕಾರಣದಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ತರಗತಿಗಳನ್ನು ಏ.1ರಿಂದ 20ರವರೆಗೆ ಪುನರಾರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಇಲಾಖೆಯ ಆದೇಶದಂತೆ, ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳಲ್ಲಿ ಪ್ರತಿದಿನ ನಾಲ್ಕು ಗಂಟೆಗಳ ತರಗತಿಗಳನ್ನು ನಡೆಸಲಾಗುತ್ತಿದ್ದು, ಎಲ್ಲಾ ಉಪನ್ಯಾಸಕರು ಕಡ್ಡಾಯವಾಗಿ ಭಾಗವಹಿಸಬೇಕಾಗಿದೆ. ಇದರಿಂದ, ಜನಗಣತಿ ಕಾರ್ಯಕ್ಕೆ ನಿಯೋಜಿಸಲ್ಪಟ್ಟ ಉಪನ್ಯಾಸಕರು ತೊಂದರೆ ಅನುಭವಿಸುತ್ತಿದ್ದಾರೆ. ದ್ವಿತೀಯ ಪಿಯು ಫಲಿತಾಂಶದ ನಿರೀಕ್ಷೆಯಲ್ಲಿದ್ದು, ನಂತರ ಮರುಎಣಿಕೆ ಮತ್ತು ಮರುಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಲಿವೆ. ಹಾಗಾಗಿ, ಉಪನ್ಯಾಸಕರು ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜನಗಣತಿ ಕಾರ್ಯದಿಂದ ವಿನಾಯಿತಿ ನೀಡುವಂತೆ ಪದವಿಪೂರ್ವ ಉಪನ್ಯಾಸಕರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. </p>.<p>ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿರುವ ಪದವಿಪೂರ್ವ ಉಪನ್ಯಾಸಕರ ಸಂಘದ ಅಧ್ಯಕ್ಷ ಎ.ಎಚ್.ನಿಂಗೇಗೌಡ, ಜನಗಣತಿಗೆ ಸಾವಿರಾರು ಉಪನ್ಯಾಸಕರನ್ನು ನಿಯೋಜಿಸಲಾಗಿದೆ. ಮಾರ್ಚ್ ತಿಂಗಳಲ್ಲೇ ಮುಖ್ಯ ತರಬೇತುದಾರರಿಗೆ ತರಬೇತಿ ಪೂರ್ಣಗೊಂಡಿದೆ. ಗಣತಿ ಕಾರ್ಯ ನಡೆಸುವವರಿಗೆ ಮೂರು ಹಂತಗಳಲ್ಲಿ ತರಬೇತಿ ನೀಡಲು ಕ್ರಮ ಕೈಗೊಳ್ಳಲಾಗಿದೆ. ಜನಗಣತಿ ಕಾರ್ಯ ಏ.16ರಿಂದ ಮೇ 16ರವರೆಗೆ ನಡೆಯಲಿದ್ದು, ಅಧಿಕೃತ ಜನಗಣತಿ ಫೆ.2027ರಿಂದ ಪ್ರಾರಂಭವಾಗಲಿದೆ. ಆದರೆ, ದ್ವಿತೀಯ ಪಿಯುಗೆ ಮೂರು ಪರೀಕ್ಷೆಗಳು, ಮೌಲ್ಯಮಾಪನ, ಪರಿಹಾರ ಬೋಧನೆ, ಸಿಇಟಿ, ನೀಟ್ ತರಬೇತಿ ಸೇರಿದಂತೆ ಹಲವು ಕೆಲಸಗಳನ್ನು ನಿರ್ವಹಿಸಬೇಕಿರುವ ಕಾರಣ ಜನಗಣತಿ ಕೆಲಸದಿಂದ ವಿನಾಯಿತಿ ನೀಡಬೇಕು ಎಂದಿದ್ದಾರೆ. </p>.<p>ವಾರ್ಷಿಕ ಪರೀಕ್ಷೆಗಳ ಕಾರಣದಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ತರಗತಿಗಳನ್ನು ಏ.1ರಿಂದ 20ರವರೆಗೆ ಪುನರಾರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಇಲಾಖೆಯ ಆದೇಶದಂತೆ, ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳಲ್ಲಿ ಪ್ರತಿದಿನ ನಾಲ್ಕು ಗಂಟೆಗಳ ತರಗತಿಗಳನ್ನು ನಡೆಸಲಾಗುತ್ತಿದ್ದು, ಎಲ್ಲಾ ಉಪನ್ಯಾಸಕರು ಕಡ್ಡಾಯವಾಗಿ ಭಾಗವಹಿಸಬೇಕಾಗಿದೆ. ಇದರಿಂದ, ಜನಗಣತಿ ಕಾರ್ಯಕ್ಕೆ ನಿಯೋಜಿಸಲ್ಪಟ್ಟ ಉಪನ್ಯಾಸಕರು ತೊಂದರೆ ಅನುಭವಿಸುತ್ತಿದ್ದಾರೆ. ದ್ವಿತೀಯ ಪಿಯು ಫಲಿತಾಂಶದ ನಿರೀಕ್ಷೆಯಲ್ಲಿದ್ದು, ನಂತರ ಮರುಎಣಿಕೆ ಮತ್ತು ಮರುಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಲಿವೆ. ಹಾಗಾಗಿ, ಉಪನ್ಯಾಸಕರು ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>