<p><strong>ಬೆಂಗಳೂರು</strong>: ಸರ್ಕಾರಿ ಪಿಯು ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆಯನ್ನು 2026–27ನೇ ಸಾಲಿನ ದಾಖಲಾತಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕವೇ ನಡೆಸಬೇಕು ಎಂದು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘ ಒತ್ತಾಯಿಸಿದೆ.</p>.<p>ಈ ಕುರಿತು ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ, ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಪತ್ರ ಬರೆದಿರುವ ಸಂಘವು, ಹೆಚ್ಚುವರಿ ಉಪನ್ಯಾಸಕರ ತಾತ್ಕಾಲಿಕ ಪಟ್ಟಿಯನ್ನು ಇಲಾಖೆ ಬಿಡುಗಡೆ ಮಾಡಿದೆ. ವಿದ್ಯಾರ್ಥಿ–ಉಪನ್ಯಾಸಕರ ಅನುಪಾತವನ್ನು ಈಗಿರುವ 320:1ರಿಂದ 180:1ಕ್ಕೆ ಪರಿಷ್ಕರಿಸಿದರೆ ‘ಹೆಚ್ಚುವರಿ’ ಇಲ್ಲವಾಗುತ್ತದೆ. ವಿದ್ಯಾರ್ಥಿಗಳಿಗೂ ಅನುಕೂಲವಾಗುತ್ತದೆ. ಈಗಿರುವ ಅನುಪಾತ ರಾಷ್ಟ್ರಮಟ್ಟದ ನೀತಿ ಮಾತ್ರವಲ್ಲ, ಅಂತಾರಾಷ್ಟ್ರೀಯ ಶೈಕ್ಷಣಿಕ ಮಾನದಂಡಗಳಿಗೂ ವಿರುದ್ಧವಾಗಿದೆ. ರಾಜ್ಯದಲ್ಲಿ ಸಿಬಿಎಸ್ಇಗೆ ಸಮಾನಾಂತರವಾಗಿ ಪಠ್ಯಕ್ರಮ ಜಾರಿಗೆ ತರುತ್ತಿರುವ ಕಾರಣ ವಿದ್ಯಾರ್ಥಿ– ಉಪನ್ಯಾಸಕ ಅನುಪಾತವನ್ನು ಪರಿಷ್ಕರಿಸಬೇಕು ಎಂದು ಒತ್ತಾಯಿಸಿದೆ.</p>.<p>‘ವಿದ್ಯಾರ್ಥಿ–ಉಪನ್ಯಾಸಕರ ಅನುಪಾತವನ್ನು ಪರಿಷ್ಕರಿಸಿದ ನಂತರ ಹೆಚ್ಚುವರಿ ಉಪನ್ಯಾಸಕರ ಅಂತಿಮ ಪಟ್ಟಿ ಪ್ರಕಟಿಸಬೇಕು. ನಂತರವೇ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಬೇಕು. ಹಾಗೆ ಮಾಡದೆ ಇದ್ದರೆ ಉಪನ್ಯಾಸಕರಿಗೆ ತೊಂದರೆಯಾಗುತ್ತದೆ. ಆಡಳಿತಾತ್ಮಕ ಗೊಂದಲಗಳಿಗೆ ಕಾರಣವಾಗುತ್ತದೆ’ ಎಂದು ಸಂಘದ ಅಧ್ಯಕ್ಷ ಎ.ಎಚ್.ನಿಂಗೇಗೌಡ ಪತ್ರದಲ್ಲಿ ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸರ್ಕಾರಿ ಪಿಯು ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆಯನ್ನು 2026–27ನೇ ಸಾಲಿನ ದಾಖಲಾತಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕವೇ ನಡೆಸಬೇಕು ಎಂದು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘ ಒತ್ತಾಯಿಸಿದೆ.</p>.<p>ಈ ಕುರಿತು ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ, ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಪತ್ರ ಬರೆದಿರುವ ಸಂಘವು, ಹೆಚ್ಚುವರಿ ಉಪನ್ಯಾಸಕರ ತಾತ್ಕಾಲಿಕ ಪಟ್ಟಿಯನ್ನು ಇಲಾಖೆ ಬಿಡುಗಡೆ ಮಾಡಿದೆ. ವಿದ್ಯಾರ್ಥಿ–ಉಪನ್ಯಾಸಕರ ಅನುಪಾತವನ್ನು ಈಗಿರುವ 320:1ರಿಂದ 180:1ಕ್ಕೆ ಪರಿಷ್ಕರಿಸಿದರೆ ‘ಹೆಚ್ಚುವರಿ’ ಇಲ್ಲವಾಗುತ್ತದೆ. ವಿದ್ಯಾರ್ಥಿಗಳಿಗೂ ಅನುಕೂಲವಾಗುತ್ತದೆ. ಈಗಿರುವ ಅನುಪಾತ ರಾಷ್ಟ್ರಮಟ್ಟದ ನೀತಿ ಮಾತ್ರವಲ್ಲ, ಅಂತಾರಾಷ್ಟ್ರೀಯ ಶೈಕ್ಷಣಿಕ ಮಾನದಂಡಗಳಿಗೂ ವಿರುದ್ಧವಾಗಿದೆ. ರಾಜ್ಯದಲ್ಲಿ ಸಿಬಿಎಸ್ಇಗೆ ಸಮಾನಾಂತರವಾಗಿ ಪಠ್ಯಕ್ರಮ ಜಾರಿಗೆ ತರುತ್ತಿರುವ ಕಾರಣ ವಿದ್ಯಾರ್ಥಿ– ಉಪನ್ಯಾಸಕ ಅನುಪಾತವನ್ನು ಪರಿಷ್ಕರಿಸಬೇಕು ಎಂದು ಒತ್ತಾಯಿಸಿದೆ.</p>.<p>‘ವಿದ್ಯಾರ್ಥಿ–ಉಪನ್ಯಾಸಕರ ಅನುಪಾತವನ್ನು ಪರಿಷ್ಕರಿಸಿದ ನಂತರ ಹೆಚ್ಚುವರಿ ಉಪನ್ಯಾಸಕರ ಅಂತಿಮ ಪಟ್ಟಿ ಪ್ರಕಟಿಸಬೇಕು. ನಂತರವೇ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಬೇಕು. ಹಾಗೆ ಮಾಡದೆ ಇದ್ದರೆ ಉಪನ್ಯಾಸಕರಿಗೆ ತೊಂದರೆಯಾಗುತ್ತದೆ. ಆಡಳಿತಾತ್ಮಕ ಗೊಂದಲಗಳಿಗೆ ಕಾರಣವಾಗುತ್ತದೆ’ ಎಂದು ಸಂಘದ ಅಧ್ಯಕ್ಷ ಎ.ಎಚ್.ನಿಂಗೇಗೌಡ ಪತ್ರದಲ್ಲಿ ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>