‘ವರ್ಗಾವಣೆ ಸಂಬಂಧ ಹಿಂದಿನ ಶಿಕ್ಷಣ ಸಚಿವರು, ಕಾರ್ಯದರ್ಶಿಗಳು ಹಾಗೂ ನಿರ್ದೇಶಕರ ಜೊತೆಗೆ ಹಲವು ಬಾರಿ ಚರ್ಚಿಸಲಾಗಿತ್ತು. ನೀವು ಸಚಿವರಾದ ಮೇಲೆ ನಿಮ್ಮೊಂದಿಗೂ ಈ ಬಗ್ಗೆ ಮಾತನಾಡಿದ್ದೇವೆ. ಹೀಗಿದ್ದರೂ ಕಾಯ್ದೆ ಅನುಷ್ಠಾನಗೊಂಡಿಲ್ಲ. ಇಲಾಖೆಯ ವಿಳಂಬ ಧೋರಣೆ ಖಂಡಿಸಿ ಒಮ್ಮೆ ಸಾಂಕೇತಿಕವಾಗಿ ಧರಣಿ ನಡೆಸಲಾಗಿದೆ. ಅಧಿವೇಶನದ ಸಮಯದಲ್ಲೇ ಕಾಯ್ದೆ ಜಾರಿಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದ ತಾವು ಮಾತು ಮರೆತಿದ್ದೀರಿ. ನವೆಂಬರ್ 10ರೊಳಗೆ ನಮ್ಮ ಬೇಡಿಕೆ ಈಡೇರದಿದ್ದರೆ ಪ್ರತಿಭಟನೆಯ ಹಾದಿ ಹಿಡಿಯುವುದು ಅನಿವಾರ್ಯ’ ಎಂದು ಪತ್ರದಲ್ಲಿ ವಿವರಿಸಲಾಗಿದೆ.