<p><strong>ಬೆಂಗಳೂರು</strong>: ಪ್ರಥಮ ಮತ್ತು ದ್ವಿತೀಯ ಪಿಯು ತರಗತಿಗಳ ವಿಜ್ಞಾನ ವಿಷಯಗಳನ್ನು (ಭೌತ ವಿಜ್ಞಾನ, ರಸಾಯನ ವಿಜ್ಞಾನ, ಜೀವ ವಿಜ್ಞಾನ, ಗಣಿತ ಶಾಸ್ತ್ರ) ಹೊರತುಪಡಿಸಿ, ಇತರ 33 ವಿಷಯಗಳಲ್ಲಿ ಶೇ 30ರಷ್ಟು ಪಠ್ಯವನ್ನು ಕಡಿತಗೊಳಿಸಲು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಪಠ್ಯಕ್ರಮ 2020–21ನೇ ಶೈಕ್ಷಣಿಕ ವರ್ಷಕ್ಕೆ ಮಾತ್ರ ಅನ್ವಯ ಆಗಲಿದೆ.</p>.<p>ವಿಜ್ಞಾನ ವಿಷಯಗಳ ಪಠ್ಯ ಕಡಿತವನ್ನು ಸಿಬಿಎಸ್ಇ ಶಿಕ್ಷಣ ಮಂಡಳಿ ನಿಗದಿಪಡಿಸಿದಂತೆ ಯಥಾವತ್ ಅಳವಡಿಸಲು ತೀರ್ಮಾನಿಸಲಾಗಿದೆ. ಇತರ ಒಟ್ಟು 34 ವಿಷಯಗಳಲ್ಲಿ ಕರ್ನಾಟಕ ಸಂಗೀತ ವಿಷಯಕ್ಕೆ ಕಳೆದ ಎರಡು ವರ್ಷಗಳಲ್ಲಿ ಯಾವುದೇ ವಿದ್ಯಾರ್ಥಿ ದಾಖಲಾಗದೇ ಇರುವುದರಿಂದ ಆ ವಿಷಯವನ್ನು ಪಠ್ಯ ಕಡಿತ ಪ್ರಕ್ರಿಯೆಯಿಂದ ಕೈಬಿಡಲಾಗಿದೆ.</p>.<p>‘ಈಗಾಗಲೇ ಕೇಂದ್ರ ಸರ್ಕಾರ 1ರಿಂದ 12ನೇ ತರಗತಿವರೆಗೆ ಶೇ 30ರಷ್ಟು ಪಠ್ಯ ಕಡಿತಗೊಳಿಸಿದೆ. ರಾಜ್ಯ ಸರ್ಕಾರದ ಸೂಚನೆಯಂತೆ ಈ ಕ್ರಮ ತೆಗೆದುಕೊಳ್ಳಲಾಗಿದ್ದು, ಪಠ್ಯ ಪುಸ್ತಕ ರಚನಾ ಸಮಿತಿ ಮತ್ತು ಪರಿಷ್ಕರಣಾ ಸಮಿತಿಯ ಸದಸ್ಯರು ಕಡಿತಗೊಳಿಸಬಹುದಾದ ಪಠ್ಯಗಳ ಕುರಿತು ವರದಿ ನೀಡಿದ್ದಾರೆ. ಇಲಾಖೆಯ ವೆಬ್ಸೈಟ್ನಲ್ಲಿ ಕಡಿತಗೊಳಿಸಿದ ಪಠ್ಯಗಳ ಮಾಹಿತಿ ಲಭ್ಯವಿದೆ’ ಎಂದು ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪ್ರಥಮ ಮತ್ತು ದ್ವಿತೀಯ ಪಿಯು ತರಗತಿಗಳ ವಿಜ್ಞಾನ ವಿಷಯಗಳನ್ನು (ಭೌತ ವಿಜ್ಞಾನ, ರಸಾಯನ ವಿಜ್ಞಾನ, ಜೀವ ವಿಜ್ಞಾನ, ಗಣಿತ ಶಾಸ್ತ್ರ) ಹೊರತುಪಡಿಸಿ, ಇತರ 33 ವಿಷಯಗಳಲ್ಲಿ ಶೇ 30ರಷ್ಟು ಪಠ್ಯವನ್ನು ಕಡಿತಗೊಳಿಸಲು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಪಠ್ಯಕ್ರಮ 2020–21ನೇ ಶೈಕ್ಷಣಿಕ ವರ್ಷಕ್ಕೆ ಮಾತ್ರ ಅನ್ವಯ ಆಗಲಿದೆ.</p>.<p>ವಿಜ್ಞಾನ ವಿಷಯಗಳ ಪಠ್ಯ ಕಡಿತವನ್ನು ಸಿಬಿಎಸ್ಇ ಶಿಕ್ಷಣ ಮಂಡಳಿ ನಿಗದಿಪಡಿಸಿದಂತೆ ಯಥಾವತ್ ಅಳವಡಿಸಲು ತೀರ್ಮಾನಿಸಲಾಗಿದೆ. ಇತರ ಒಟ್ಟು 34 ವಿಷಯಗಳಲ್ಲಿ ಕರ್ನಾಟಕ ಸಂಗೀತ ವಿಷಯಕ್ಕೆ ಕಳೆದ ಎರಡು ವರ್ಷಗಳಲ್ಲಿ ಯಾವುದೇ ವಿದ್ಯಾರ್ಥಿ ದಾಖಲಾಗದೇ ಇರುವುದರಿಂದ ಆ ವಿಷಯವನ್ನು ಪಠ್ಯ ಕಡಿತ ಪ್ರಕ್ರಿಯೆಯಿಂದ ಕೈಬಿಡಲಾಗಿದೆ.</p>.<p>‘ಈಗಾಗಲೇ ಕೇಂದ್ರ ಸರ್ಕಾರ 1ರಿಂದ 12ನೇ ತರಗತಿವರೆಗೆ ಶೇ 30ರಷ್ಟು ಪಠ್ಯ ಕಡಿತಗೊಳಿಸಿದೆ. ರಾಜ್ಯ ಸರ್ಕಾರದ ಸೂಚನೆಯಂತೆ ಈ ಕ್ರಮ ತೆಗೆದುಕೊಳ್ಳಲಾಗಿದ್ದು, ಪಠ್ಯ ಪುಸ್ತಕ ರಚನಾ ಸಮಿತಿ ಮತ್ತು ಪರಿಷ್ಕರಣಾ ಸಮಿತಿಯ ಸದಸ್ಯರು ಕಡಿತಗೊಳಿಸಬಹುದಾದ ಪಠ್ಯಗಳ ಕುರಿತು ವರದಿ ನೀಡಿದ್ದಾರೆ. ಇಲಾಖೆಯ ವೆಬ್ಸೈಟ್ನಲ್ಲಿ ಕಡಿತಗೊಳಿಸಿದ ಪಠ್ಯಗಳ ಮಾಹಿತಿ ಲಭ್ಯವಿದೆ’ ಎಂದು ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>