ಪರೀಕ್ಷೆಗಳು ಈ ತಿಂಗಳ 19ರಿಂದ ಆರಂಭವಾಗಬೇಕಿತ್ತು. ಪಠ್ಯಗಳು ಪೂರ್ಣಗೊಳ್ಳದ ಕಾರಣ ಪರೀಕ್ಷೆ ಮುಂದೂಡುವಂತೆ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೆ.ಟಿ.ಶ್ರೀಕಂಠೇಗೌಡ, ಉಪನ್ಯಾಸಕರ ಸಂಘದ ಅಧ್ಯಕ್ಷ ಎ.ಎಚ್. ನಿಂಗೇಗೌಡ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಶರವಣ ಅವರು ಬುಧವಾರ ಇಲಾಖೆಯ ನಿರ್ದೇಶಕ ರಾಮಚಂದ್ರನ್ ಅವರನ್ನು ಭೇಟಿಮಾಡಿ ಮನವಿ ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಇಲಾಖೆ ಈ ಅನುಮತಿ ನೀಡಿದೆ.