<p><strong>ಬೆಂಗಳೂರು</strong>: ‘ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರು ಒಬ್ಬ ಸಾಹಿತ್ಯದ ಬಗ್ಗೆ ಮಾತನಾಡುವುದಕ್ಕಿಂತಲೂ ಸಮಾಜದಲ್ಲಿ ಆಗಬೇಕಾದ ಬದಲಾವಣೆ ಕುರಿತು ಹೆಚ್ಚು ಮಾತನಾಡುತ್ತಿದ್ದರು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p>.<p>ಮುಖ್ಯಮಂತ್ರಿ ಗೃಹ ಕಚೇರಿಯಲ್ಲಿ ಮುನಿಸ್ವಾಮಿ ಅಂಡ್ ಸನ್ಸ್ , ಎಂ.ಚಂದ್ರಶೇಖರ್ ಪ್ರತಿಷ್ಠಾನ ಬೆಂಗಳೂರು ಹಾಗೂ ಪೂರ್ಣಚಂದ್ರ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ‘ಶ್ರೀ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಸಮಗ್ರ ಕೃತಿ ಜಗತ್ತು’–ಹದಿನಾಲ್ಕು ಸಂಪುಟಗಳನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.</p>.<p>‘ತೇಜಸ್ವಿಗೆ ಮೈಸೂರಿನಲ್ಲಿ ರಾಮದಾಸ್ ಎಂಬ ಪ್ರಾಧ್ಯಾಪಕ ಸ್ನೇಹಿತರಿದ್ದರು. ಅವರ ಮನೆಗೆ ತೇಜಸ್ವಿ ಬಂದಾಗಲೆಲ್ಲಾ ನಾನೂ ಹೋಗುತ್ತಿದ್ದೆ. ಹಲವು ಬಾರಿ ದೇವನೂರ ಮಹಾದೇವ ಬರುತ್ತಿದ್ದರು. ಸಾಮಾಜಿಕ ಬದಲಾವಣೆ ಬಗ್ಗೆ ಅಲ್ಲಿ ಚರ್ಚೆಯಾಗುತ್ತಿತ್ತು. ತೇಜಸ್ವಿ ಅವರ ಮಾತು ಕೇಳಲು ನಾನು ಉತ್ಸುಕನಾಗಿರುತ್ತಿದ್ದೆ’ ಎಂದು ನೆನಪಿಸಿಕೊಂಡರು.</p>.<p>‘ತಮ್ಮ ತೋಟಕ್ಕೆ ಬಂದು ಒಂದು ದಿನ ಕಳೆಯಿರಿ ಎಂದು ತೇಜಸ್ವಿ ಹಲವು ಬಾರಿ ಹೇಳಿದ್ದರು. ಅದು ಸಾಧ್ಯವೇ ಆಗಲಿಲ್ಲ. ಅವರ ಕಾಲಾನಂತರದಲ್ಲಿ ಅವರ ಮನೆಗೆ ಹೋಗಿ ಊಟ ಮಾಡಿ ಬಂದೆ’ ಎಂದು ಸ್ಮರಿಸಿದರು.</p>.<p>ಕಾರ್ಯಕ್ರಮದಲ್ಲಿ ಕುವೆಂಪು ವಿಚಾರ ವೇದಿಕೆಯ ಅಧ್ಯಕ್ಷ ಎಂ.ಸಿ ನರೇಂದ್ರ, ಪ್ರೊ.ರವಿವರ್ಮ ಕುಮಾರ್, ಸಮಗ್ರ ಸಂಪುಟದ ಸಂಪಾದಕ ಕೆ.ಸಿ.ಶಿವಾರೆಡ್ಡಿ, ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ವೂಡೆ ಪಿ.ಕೃಷ್ಣಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರು ಒಬ್ಬ ಸಾಹಿತ್ಯದ ಬಗ್ಗೆ ಮಾತನಾಡುವುದಕ್ಕಿಂತಲೂ ಸಮಾಜದಲ್ಲಿ ಆಗಬೇಕಾದ ಬದಲಾವಣೆ ಕುರಿತು ಹೆಚ್ಚು ಮಾತನಾಡುತ್ತಿದ್ದರು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p>.<p>ಮುಖ್ಯಮಂತ್ರಿ ಗೃಹ ಕಚೇರಿಯಲ್ಲಿ ಮುನಿಸ್ವಾಮಿ ಅಂಡ್ ಸನ್ಸ್ , ಎಂ.ಚಂದ್ರಶೇಖರ್ ಪ್ರತಿಷ್ಠಾನ ಬೆಂಗಳೂರು ಹಾಗೂ ಪೂರ್ಣಚಂದ್ರ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ‘ಶ್ರೀ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಸಮಗ್ರ ಕೃತಿ ಜಗತ್ತು’–ಹದಿನಾಲ್ಕು ಸಂಪುಟಗಳನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.</p>.<p>‘ತೇಜಸ್ವಿಗೆ ಮೈಸೂರಿನಲ್ಲಿ ರಾಮದಾಸ್ ಎಂಬ ಪ್ರಾಧ್ಯಾಪಕ ಸ್ನೇಹಿತರಿದ್ದರು. ಅವರ ಮನೆಗೆ ತೇಜಸ್ವಿ ಬಂದಾಗಲೆಲ್ಲಾ ನಾನೂ ಹೋಗುತ್ತಿದ್ದೆ. ಹಲವು ಬಾರಿ ದೇವನೂರ ಮಹಾದೇವ ಬರುತ್ತಿದ್ದರು. ಸಾಮಾಜಿಕ ಬದಲಾವಣೆ ಬಗ್ಗೆ ಅಲ್ಲಿ ಚರ್ಚೆಯಾಗುತ್ತಿತ್ತು. ತೇಜಸ್ವಿ ಅವರ ಮಾತು ಕೇಳಲು ನಾನು ಉತ್ಸುಕನಾಗಿರುತ್ತಿದ್ದೆ’ ಎಂದು ನೆನಪಿಸಿಕೊಂಡರು.</p>.<p>‘ತಮ್ಮ ತೋಟಕ್ಕೆ ಬಂದು ಒಂದು ದಿನ ಕಳೆಯಿರಿ ಎಂದು ತೇಜಸ್ವಿ ಹಲವು ಬಾರಿ ಹೇಳಿದ್ದರು. ಅದು ಸಾಧ್ಯವೇ ಆಗಲಿಲ್ಲ. ಅವರ ಕಾಲಾನಂತರದಲ್ಲಿ ಅವರ ಮನೆಗೆ ಹೋಗಿ ಊಟ ಮಾಡಿ ಬಂದೆ’ ಎಂದು ಸ್ಮರಿಸಿದರು.</p>.<p>ಕಾರ್ಯಕ್ರಮದಲ್ಲಿ ಕುವೆಂಪು ವಿಚಾರ ವೇದಿಕೆಯ ಅಧ್ಯಕ್ಷ ಎಂ.ಸಿ ನರೇಂದ್ರ, ಪ್ರೊ.ರವಿವರ್ಮ ಕುಮಾರ್, ಸಮಗ್ರ ಸಂಪುಟದ ಸಂಪಾದಕ ಕೆ.ಸಿ.ಶಿವಾರೆಡ್ಡಿ, ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ವೂಡೆ ಪಿ.ಕೃಷ್ಣಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>