<p><strong>ಬೆಂಗಳೂರು:</strong> ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ (ಕೆಆರ್ಡಿಸಿಎಲ್) ವತಿಯಿಂದ ಬೆಂಗಳೂರು ನಗರದ ಸುತ್ತಮುತ್ತಲಿನ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗಾಗಿ 7,000 ಮರಗಳನ್ನು ಕಡಿಯುವುದಕ್ಕೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆ ತೆರವುಗೊಳಿಸಲು ಅಗತ್ಯವಿರುವ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಅವರು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<p>ವಿಕಾಸಸೌಧದಲ್ಲಿ ಸೋಮವಾರ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಅವರು, ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್, ಮರಗಳ ಕಡಿತಲೆಗೆ ತಡೆಯಾಜ್ಞೆ ನೀಡಿರುವ ಕುರಿತು ಮಾಹಿತಿ ಪಡೆದರು. ತಡೆಯಾಜ್ಞೆ ತೆರವಿಗೆ ಅಗತ್ಯವಿರುವ ಕ್ರಮಕ್ಕೆ ಸೂಚಿಸಿದರು. ಜಮೀನು ಲಭ್ಯವಿರುವ ಸ್ಥಳಗಳಲ್ಲಿ ಕಾಮಗಾರಿ ಆರಂಭಿಸುವಂತೆಯೂ ನಿರ್ದೇಶನ ನೀಡಿದರು.</p>.<p>ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ (ಎಸ್ಎಚ್ಡಿಪಿ) ನಾಲ್ಕನೇ ಹಂತದ ಕಾಮಗಾರಿಗಳಿಗೆ ಯೋಜನಾ ವರದಿ ತಯಾರಿಗೆ ಶೀಘ್ರವಾಗಿ ಗುತ್ತಿಗೆ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಅಪಘಾತ ವಲಯಗಳನ್ನು ಗುರುತಿಸಿ ಸುಧಾರಣಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು. ಮಳೆ, ಪ್ರವಾಹ ಮತ್ತು ಭೂಕುಸಿತದಿಂದ ಹಾನಿಯಾಗಿರುವ ರಸ್ತೆ, ಸೇತುವೆಗಳನ್ನು ಆದ್ಯತೆ ಮೇರೆಗೆ ದುರಸ್ತಿ ಮಾಡಬೇಕು ಎಂದು ಅವರು ಸೂಚಿಸಿದರು.</p>.<p>ರಾಜ್ಯದ ಬಜೆಟ್ ಗಾತ್ರದಲ್ಲಿ ಹೆಚ್ಚಳ ಆಗಿದ್ದರೂ, ಲೋಕೋಪಯೋಗಿ ಇಲಾಖೆಗೆ ನೀಡುತ್ತಿರುವ ಅನುದಾನದಲ್ಲಿ ಐದು ವರ್ಷಗಳಿಂದ ಯಾವುದೇ ಬದಲಾವಣೆ ಆಗಿಲ್ಲ ಎಂದು ಇಲಾಖೆಯ ಕಾರ್ಯದರ್ಶಿ ಕೃಷ್ಣಾ ರೆಡ್ಡಿ ಸಚಿವರಿಗೆ ತಿಳಿಸಿದರು. ಐದು ವರ್ಷಗಳ ಬಜೆಟ್ ಗಾತ್ರ ಮತ್ತು ಅನುದಾನ ಹಂಚಿಕೆಗೆ ಸಂಬಂಧಿಸಿದ ಸಮಗ್ರ ಮಾಹಿತಿ ಸಲ್ಲಿಸುವಂತೆ ಸಚಿವರು ನಿರ್ದೇಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ (ಕೆಆರ್ಡಿಸಿಎಲ್) ವತಿಯಿಂದ ಬೆಂಗಳೂರು ನಗರದ ಸುತ್ತಮುತ್ತಲಿನ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗಾಗಿ 7,000 ಮರಗಳನ್ನು ಕಡಿಯುವುದಕ್ಕೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆ ತೆರವುಗೊಳಿಸಲು ಅಗತ್ಯವಿರುವ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಅವರು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<p>ವಿಕಾಸಸೌಧದಲ್ಲಿ ಸೋಮವಾರ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಅವರು, ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್, ಮರಗಳ ಕಡಿತಲೆಗೆ ತಡೆಯಾಜ್ಞೆ ನೀಡಿರುವ ಕುರಿತು ಮಾಹಿತಿ ಪಡೆದರು. ತಡೆಯಾಜ್ಞೆ ತೆರವಿಗೆ ಅಗತ್ಯವಿರುವ ಕ್ರಮಕ್ಕೆ ಸೂಚಿಸಿದರು. ಜಮೀನು ಲಭ್ಯವಿರುವ ಸ್ಥಳಗಳಲ್ಲಿ ಕಾಮಗಾರಿ ಆರಂಭಿಸುವಂತೆಯೂ ನಿರ್ದೇಶನ ನೀಡಿದರು.</p>.<p>ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ (ಎಸ್ಎಚ್ಡಿಪಿ) ನಾಲ್ಕನೇ ಹಂತದ ಕಾಮಗಾರಿಗಳಿಗೆ ಯೋಜನಾ ವರದಿ ತಯಾರಿಗೆ ಶೀಘ್ರವಾಗಿ ಗುತ್ತಿಗೆ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಅಪಘಾತ ವಲಯಗಳನ್ನು ಗುರುತಿಸಿ ಸುಧಾರಣಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು. ಮಳೆ, ಪ್ರವಾಹ ಮತ್ತು ಭೂಕುಸಿತದಿಂದ ಹಾನಿಯಾಗಿರುವ ರಸ್ತೆ, ಸೇತುವೆಗಳನ್ನು ಆದ್ಯತೆ ಮೇರೆಗೆ ದುರಸ್ತಿ ಮಾಡಬೇಕು ಎಂದು ಅವರು ಸೂಚಿಸಿದರು.</p>.<p>ರಾಜ್ಯದ ಬಜೆಟ್ ಗಾತ್ರದಲ್ಲಿ ಹೆಚ್ಚಳ ಆಗಿದ್ದರೂ, ಲೋಕೋಪಯೋಗಿ ಇಲಾಖೆಗೆ ನೀಡುತ್ತಿರುವ ಅನುದಾನದಲ್ಲಿ ಐದು ವರ್ಷಗಳಿಂದ ಯಾವುದೇ ಬದಲಾವಣೆ ಆಗಿಲ್ಲ ಎಂದು ಇಲಾಖೆಯ ಕಾರ್ಯದರ್ಶಿ ಕೃಷ್ಣಾ ರೆಡ್ಡಿ ಸಚಿವರಿಗೆ ತಿಳಿಸಿದರು. ಐದು ವರ್ಷಗಳ ಬಜೆಟ್ ಗಾತ್ರ ಮತ್ತು ಅನುದಾನ ಹಂಚಿಕೆಗೆ ಸಂಬಂಧಿಸಿದ ಸಮಗ್ರ ಮಾಹಿತಿ ಸಲ್ಲಿಸುವಂತೆ ಸಚಿವರು ನಿರ್ದೇಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>