<p><strong>ಬೆಂಗಳೂರು:</strong> ಶಿರಾಡಿ ಘಾಟ್ನಲ್ಲಿ ಚತುಷ್ಪಥ ರಸ್ತೆ ನಿರ್ಮಾಣವನ್ನು ಆದಷ್ಟು ಬೇಗ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ<br />ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದ್ದಾರೆ.</p>.<p>ನವದೆಹಲಿಯಲ್ಲಿ ಬುಧವಾರ ಗಡ್ಕರಿ ಅವರನ್ನು ಭೇಟಿ ಮಾಡಿದ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.</p>.<p>ಚತುಷ್ಪಥ ನಿರ್ಮಾಣ ಪೂರ್ಣಗೊಳಿಸುವುದು ಆದ್ಯತೆಯಾಗಿದೆ. ಸುರಂಗ ಮಾರ್ಗ ನಿರ್ಮಿಸುವ ವಿಚಾರದಲ್ಲಿ ಸಮಾಲೋಚಕರ ಜತೆ ಮಾತುಕತೆ ನಡೆದಿದೆ.</p>.<p>ಅಲ್ಲದೆ, ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಿಸಲು ತಾತ್ವಿಕ ಅನುಮೋದನೆ ನೀಡಿರುವ ನಾಲ್ಕು ಹೆದ್ದಾರಿಗಳ ಕುರಿತು ಸಮಗ್ರ ಯೋಜನಾ ವರದಿ ಸಿದ್ಧಪಡಿಸಿ ಕೇಂದ್ರಕ್ಕೆ ಸಲ್ಲಿಸಲಾಗಿದೆ. ಅವುಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವಂತೆ ಅವರು ಮನವಿ ಮಾಡಿದರು.</p>.<p>ವಿಜಯಪುರ–ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿ.ಮೀ 0 ರಿಂದ 80 ಕಿ.ಮೀವರೆಗೆ ಅಭಿವೃದ್ಧಿಪಡಿಸುವ ಕಾಮಗಾರಿ ನಡೆಯುತ್ತಿದ್ದು, 80 ನೇ ಕಿ.ಮೀ ನಿಂದ 168.90 ಕಿ.ಮೀ.ವರೆಗೆ ಅಭಿವೃದ್ಧಿ ಕಾರ್ಯವನ್ನು ಮುಂದುವರಿಸಲು ಗಡ್ಕರಿಯವರು ಒಪ್ಪಿಗೆ ನೀಡಿದ್ದಾರೆ. ಇವೆಲ್ಲವನ್ನೂ ಭಾರತ್ಮಾಲಾ ಯೋಜನೆಯಡಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದರು.</p>.<p>ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿ ರಾಷ್ಟ್ರೀಯ ಹೆದ್ದಾರಿಗಳು ಭಾರಿ ಪ್ರಮಾಣದಲ್ಲಿ ಹಾನಿಗೊಳಗಾಗಿವೆ. ಅವುಗಳ ದುರಸ್ತಿಗೆ ₹ 184.85 ಕೋಟಿ ಶೀಘ್ರವೇ ಬಿಡುಗಡೆ ಮಾಡುವಂತೆಯೂ ಅವರು ಮನವಿ ಮಾಡಿದರು.</p>.<p>ರಾಜ್ಯದಲ್ಲಿ 400 ಎಕರೆಯಲ್ಲಿ ಎಲೆಕ್ಟ್ರಾನಿಕ್ ಪಾರ್ಕ್ ನಿರ್ಮಿಸಲು ಉದ್ದೇಶಿಸಲಾಗಿದೆ. ಆಪ್ಟಿಕಲ್ ಫೈಬರ್ ಗ್ರಾಮೀಣ ಪ್ರದೇಶಕ್ಕೂ ವಿಸ್ತರಿಸಲು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರಿಗೆ ಮನವಿ ಮಾಡಲಾಗಿದೆ ಎಂದರು.</p>.<p>ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ, ಕಂದಾಯ ಸಚಿವ ಆರ್. ಅಶೋಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಶಿರಾಡಿ ಘಾಟ್ನಲ್ಲಿ ಚತುಷ್ಪಥ ರಸ್ತೆ ನಿರ್ಮಾಣವನ್ನು ಆದಷ್ಟು ಬೇಗ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ<br />ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದ್ದಾರೆ.</p>.<p>ನವದೆಹಲಿಯಲ್ಲಿ ಬುಧವಾರ ಗಡ್ಕರಿ ಅವರನ್ನು ಭೇಟಿ ಮಾಡಿದ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.</p>.<p>ಚತುಷ್ಪಥ ನಿರ್ಮಾಣ ಪೂರ್ಣಗೊಳಿಸುವುದು ಆದ್ಯತೆಯಾಗಿದೆ. ಸುರಂಗ ಮಾರ್ಗ ನಿರ್ಮಿಸುವ ವಿಚಾರದಲ್ಲಿ ಸಮಾಲೋಚಕರ ಜತೆ ಮಾತುಕತೆ ನಡೆದಿದೆ.</p>.<p>ಅಲ್ಲದೆ, ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಿಸಲು ತಾತ್ವಿಕ ಅನುಮೋದನೆ ನೀಡಿರುವ ನಾಲ್ಕು ಹೆದ್ದಾರಿಗಳ ಕುರಿತು ಸಮಗ್ರ ಯೋಜನಾ ವರದಿ ಸಿದ್ಧಪಡಿಸಿ ಕೇಂದ್ರಕ್ಕೆ ಸಲ್ಲಿಸಲಾಗಿದೆ. ಅವುಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವಂತೆ ಅವರು ಮನವಿ ಮಾಡಿದರು.</p>.<p>ವಿಜಯಪುರ–ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿ.ಮೀ 0 ರಿಂದ 80 ಕಿ.ಮೀವರೆಗೆ ಅಭಿವೃದ್ಧಿಪಡಿಸುವ ಕಾಮಗಾರಿ ನಡೆಯುತ್ತಿದ್ದು, 80 ನೇ ಕಿ.ಮೀ ನಿಂದ 168.90 ಕಿ.ಮೀ.ವರೆಗೆ ಅಭಿವೃದ್ಧಿ ಕಾರ್ಯವನ್ನು ಮುಂದುವರಿಸಲು ಗಡ್ಕರಿಯವರು ಒಪ್ಪಿಗೆ ನೀಡಿದ್ದಾರೆ. ಇವೆಲ್ಲವನ್ನೂ ಭಾರತ್ಮಾಲಾ ಯೋಜನೆಯಡಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದರು.</p>.<p>ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿ ರಾಷ್ಟ್ರೀಯ ಹೆದ್ದಾರಿಗಳು ಭಾರಿ ಪ್ರಮಾಣದಲ್ಲಿ ಹಾನಿಗೊಳಗಾಗಿವೆ. ಅವುಗಳ ದುರಸ್ತಿಗೆ ₹ 184.85 ಕೋಟಿ ಶೀಘ್ರವೇ ಬಿಡುಗಡೆ ಮಾಡುವಂತೆಯೂ ಅವರು ಮನವಿ ಮಾಡಿದರು.</p>.<p>ರಾಜ್ಯದಲ್ಲಿ 400 ಎಕರೆಯಲ್ಲಿ ಎಲೆಕ್ಟ್ರಾನಿಕ್ ಪಾರ್ಕ್ ನಿರ್ಮಿಸಲು ಉದ್ದೇಶಿಸಲಾಗಿದೆ. ಆಪ್ಟಿಕಲ್ ಫೈಬರ್ ಗ್ರಾಮೀಣ ಪ್ರದೇಶಕ್ಕೂ ವಿಸ್ತರಿಸಲು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರಿಗೆ ಮನವಿ ಮಾಡಲಾಗಿದೆ ಎಂದರು.</p>.<p>ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ, ಕಂದಾಯ ಸಚಿವ ಆರ್. ಅಶೋಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>