<p><strong>ಬೆಂಗಳೂರು</strong>: ಪರೀಕ್ಷೆಗೂ ಮುನ್ನವೇ ದ್ವಿತೀಯ ಪಿಯು ರಸಾಯನ ವಿಜ್ಞಾನ ಪ್ರಶ್ನೆ ಪತ್ರಿಕೆ ಬಹಿರಂಗಗೊಂಡ ಹಗರಣದ ಎಲ್ಲ 15 ಆರೋಪಿಗಳನ್ನು ನಗರದ ಸೆಷನ್ಸ್ ನ್ಯಾಯಾಲಯ ಖುಲಾಸೆಗೊಳಿಸಿದೆ.</p>.<p>ಈ ಕುರಿತ ಆದೇಶವನ್ನು ಸಿಟಿ ಸಿವಿಲ್ ಕೋರ್ಟ್ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಮುರಳೀಧರ ಪೈ ಗುರುವಾರ ಪ್ರಕಟಿಸಿದ್ದು, ‘ಆರೋಪ ಋಜುವಾತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ’ ಎಂದು ಆದೇಶದಲ್ಲಿ ವಿವರಿಸಿದ್ದಾರೆ.</p>.<p>2016ನೇ ಸಾಲಿನ ಪಿಯು ಪ್ರಶ್ನೆ ಪತ್ರಿಕೆ ಸೋರಿಕೆಯ ಈ ಪ್ರಕರಣವನ್ನು ಸಿಐಡಿಯ 13 ಸಹಾಯಕ ತನಿಖಾಧಿಕಾರಿಗಳ ತಂಡ ತನಿಖೆ ನಡೆಸಿತ್ತು. ಪ್ರಾಸಿಕ್ಯೂಷನ್ 126 ಸಾಕ್ಷಿದಾರರನ್ನು ವಿಚಾರಣೆಗೆ ಒಳಪಡಿಸಿತ್ತು. ಪ್ರಕರಣದಲ್ಲಿ ಒಂಬತ್ತು ಆರೋಪಿಗಳ ವಿರುದ್ಧ ಕೋಕಾ ಕಾಯ್ದೆ ಅನ್ವಯಿಸಲಾಗಿತ್ತು.</p>.<p>ಮೊದಲ ಆರೋಪಿ ಕುಮಾರಸ್ವಾಮಿ, ಕುಮಾರ ಕಿರಣ್ ಸೇರಿದಂತೆ ಒಟ್ಟು 15 ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಆರೋಪಿಗಳ ಪರವಾಗಿ ಆರ್.ಪಿ.ಚಂದ್ರಶೇಖರ್ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪರೀಕ್ಷೆಗೂ ಮುನ್ನವೇ ದ್ವಿತೀಯ ಪಿಯು ರಸಾಯನ ವಿಜ್ಞಾನ ಪ್ರಶ್ನೆ ಪತ್ರಿಕೆ ಬಹಿರಂಗಗೊಂಡ ಹಗರಣದ ಎಲ್ಲ 15 ಆರೋಪಿಗಳನ್ನು ನಗರದ ಸೆಷನ್ಸ್ ನ್ಯಾಯಾಲಯ ಖುಲಾಸೆಗೊಳಿಸಿದೆ.</p>.<p>ಈ ಕುರಿತ ಆದೇಶವನ್ನು ಸಿಟಿ ಸಿವಿಲ್ ಕೋರ್ಟ್ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಮುರಳೀಧರ ಪೈ ಗುರುವಾರ ಪ್ರಕಟಿಸಿದ್ದು, ‘ಆರೋಪ ಋಜುವಾತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ’ ಎಂದು ಆದೇಶದಲ್ಲಿ ವಿವರಿಸಿದ್ದಾರೆ.</p>.<p>2016ನೇ ಸಾಲಿನ ಪಿಯು ಪ್ರಶ್ನೆ ಪತ್ರಿಕೆ ಸೋರಿಕೆಯ ಈ ಪ್ರಕರಣವನ್ನು ಸಿಐಡಿಯ 13 ಸಹಾಯಕ ತನಿಖಾಧಿಕಾರಿಗಳ ತಂಡ ತನಿಖೆ ನಡೆಸಿತ್ತು. ಪ್ರಾಸಿಕ್ಯೂಷನ್ 126 ಸಾಕ್ಷಿದಾರರನ್ನು ವಿಚಾರಣೆಗೆ ಒಳಪಡಿಸಿತ್ತು. ಪ್ರಕರಣದಲ್ಲಿ ಒಂಬತ್ತು ಆರೋಪಿಗಳ ವಿರುದ್ಧ ಕೋಕಾ ಕಾಯ್ದೆ ಅನ್ವಯಿಸಲಾಗಿತ್ತು.</p>.<p>ಮೊದಲ ಆರೋಪಿ ಕುಮಾರಸ್ವಾಮಿ, ಕುಮಾರ ಕಿರಣ್ ಸೇರಿದಂತೆ ಒಟ್ಟು 15 ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಆರೋಪಿಗಳ ಪರವಾಗಿ ಆರ್.ಪಿ.ಚಂದ್ರಶೇಖರ್ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>