‘ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಪರಿಗಣಿಸಿ ₹5,300 ಕೋಟಿ ಅನುದಾನ ನೀಡಲಾಗುವುದು ಎಂದು ಕಳೆದ ಬಜೆಟ್ನಲ್ಲಿ ಪ್ರಕಟಿಸಲಾಗಿತ್ತು. ಆದರೆ, ಈವರೆಗೆ ಅನುದಾನ ಬಿಡುಗಡೆ ಮಾಡಿಲ್ಲ. ರಾಜ್ಯ ಸರ್ಕಾರ ಸಹ ಹಣ ನೀಡಿಲ್ಲ. ಇದರಿಂದಾಗಿ, ಯೋಜನೆಯ ಕಾಮಗಾರಿ ಮಂದಗತಿಯಲ್ಲಿ ಸಾಗಿದೆ’ ಎಂದು ನಿಯೋಗವು ಸಚಿವರ ಗಮನಕ್ಕೆ ತಂದಿತು.