ಸೋಮವಾರ, 13 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭದ್ರಾ ಮೇಲ್ದಂಡೆಗೆ ಶೀಘ್ರ ಅನುದಾನ: ಗಜೇಂದ್ರ ಸಿಂಗ್‌ ಶೆಖಾವತ್‌ ಭರವಸೆ

Published 1 ಫೆಬ್ರುವರಿ 2024, 15:37 IST
Last Updated 1 ಫೆಬ್ರುವರಿ 2024, 15:37 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಗೆ ₹5,300 ಕೋಟಿ ಅನುದಾನವನ್ನು ಶೀಘ್ರ ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೆಖಾವತ್‌ ಭರವಸೆ ನೀಡಿದರು. 

ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ನೇತೃತ್ವದಲ್ಲಿ ಹಿರಿಯೂರಿನ ತಾಲ್ಲೂಕು ಕೃಷಿಕ ಸಮಾಜದ ಪದಾಧಿಕಾರಿಗಳು ಜಲಶಕ್ತಿ ಸಚಿವರನ್ನು ಗುರುವಾರ ಭೇಟಿ ಮಾಡಿದರು. ನಿಯೋಗಕ್ಕೆ ಸಚಿವರು ಈ ಭರವಸೆ ನೀಡಿದರು. 

‘ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಪರಿಗಣಿಸಿ ₹5,300 ಕೋಟಿ ಅನುದಾನ ನೀಡಲಾಗುವುದು ಎಂದು ಕಳೆದ ಬಜೆಟ್‌ನಲ್ಲಿ ಪ್ರಕಟಿಸಲಾಗಿತ್ತು. ಆದರೆ, ಈವರೆಗೆ ಅನುದಾನ ಬಿಡುಗಡೆ ಮಾಡಿಲ್ಲ. ರಾಜ್ಯ ಸರ್ಕಾರ ಸಹ ಹಣ ನೀಡಿಲ್ಲ. ಇದರಿಂದಾಗಿ, ಯೋಜನೆಯ ಕಾಮಗಾರಿ ಮಂದಗತಿಯಲ್ಲಿ ಸಾಗಿದೆ’ ಎಂದು ನಿಯೋಗವು ಸಚಿವರ ಗಮನಕ್ಕೆ ತಂದಿತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT