ಬಂಧನ, ಬಿಡುಗಡೆ: ಬಾಗಿನ ಸಲ್ಲಿಸಲು ಬಂದಿದ್ದ ಮುಖ್ಯಮಂತ್ರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಲು ಮುಂದಾಗಿದ್ದ ವಿವಿಧ ಸಂಘಟನೆಗಳ ಮುಖಂಡರನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದರು. ಮುಂಜಾಗ್ರತಾ ಕ್ರಮವಾಗಿ ಕೆಲವರನ್ನು ಬೆಳಿಗ್ಗೆಯೇ ವಶಕ್ಕೆ ಪಡೆಯಲಾಗಿತ್ತು. ಹಲವು ಮುಖಂಡರು ಮನೆಯಿಂದ ಹೊರಗೆ ಬಾರದಂತೆ ದಿಗ್ಬಂಧನ ವಿಧಿಸಲಾಗಿತ್ತು.