ಈ ಬಗ್ಗೆ ಮಾಹಿತಿ ನೀಡಿರುವ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ, ‘ವ್ಯಾಜ್ಯಗಳ ವಿರುದ್ಧ ಹೋರಾಡಲು ಬಲವಿಲ್ಲದ ಬಡವರು ಹಾಗೂ ಇತರ ವ್ಯಕ್ತಿಗಳನ್ನು ಒಳಗೊಂಡಿರುವ ಪ್ರಕರಣಗಳನ್ನು ಆರು ತಿಂಗಳಲ್ಲಿ ಇತ್ಯರ್ಥಪಡಿಸಲು ಈ ತಿದ್ದುಪಡಿಯು ಸಹಕಾರಿ ಆಗಲಿದೆ. ಇದೊಂದು ಕ್ರಾಂತಿಕಾರಕ ಕಾನೂನು ಆಗಿದೆ. ದೇಶದಲ್ಲಿಯೇ ಮೊದಲು ಎನಿಸಿರುವ ಈ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕಿರುವುದರಿಂದ, ಜಾರಿಗೊಳಿಸಲಾಗುವುದು’ ಎಂದರು.