<p><strong>ಕೆಂಗೇರಿ</strong>: ‘ಸಂಪೂರ್ಣ ಅಧ್ಯಯನ ಮಾಡದೆ ಬಜೆಟ್ ಕುರಿತು ಹೇಳಿಕೆ ನೀಡಿರುವ ಆರ್. ಅಶೋಕ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಯೋಗ್ಯರಲ್ಲ’ ಎಂದು ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ವಾಗ್ದಾಳಿ ನಡೆಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಗರಿಗೆ ಅಧ್ಯಯನದ ಕೊರತೆಯಿದೆ. 197 ಪುಟಗಳ ಬಜೆಟ್ ಪ್ರತಿಯನ್ನು ಸಂಪೂರ್ಣವಾಗಿ ಪರಾಮರ್ಶಿಸದೆ ಹೇಳಿಕೆ ನೀಡುತ್ತಿದ್ದಾರೆ’ ಎಂದು ಟೀಕಿಸಿದರು.</p>.<p>‘ಹಿಂದುಳಿದವರು, ದಲಿತರು, ಅಲ್ಪ ಸಂಖ್ಯಾತರು ಸೇರಿದಂತೆ ಎಲ್ಲಾ ವರ್ಗದವರನ್ನು ಮೇಲೆತ್ತುವ ಗುರಿಯೊಂದಿಗೆ ಬಜೆಟ್ ಮಂಡಿಸಲಾಗಿದೆ. ಅಧ್ಯಯನದ ಕೊರತೆಯಿಂದ ವಿಪಕ್ಷ ನಾಯಕ ಹಲಾಲ್ ಬಜೆಟ್ ಎಂದು ಆರೋಪಿಸುತ್ತಿದ್ದಾರೆ. ಬಿಜೆಪಿಗರಿಗೆ ಜನರ ಭಾವನೆಯನ್ನು ಕೆರಳಿಸುವುದೇ ಕಾಯಕವಾಗಿದೆ’ ಎಂದು ಆಕ್ರೋಶ ವ್ಯಕ್ತ ಪಡಿಸಿದರು.</p>.<p>‘ಬಜೆಟ್ನಲ್ಲಿ ನ್ಯೂನತೆಗಳಿದ್ದರೆ ವಿಪಕ್ಷ ನಾಯಕ ಸ್ಥಾನದಲ್ಲಿರುವವರು ಅದನ್ನು ಸದನ ಮುಂದೆ ಇಟ್ಟು ಚರ್ಚಿಸಬೇಕು. ಯಾರೋ ಪಕ್ಕದಲ್ಲಿದ್ದವರು ಬೋಗಸ್ ಬಜೆಟ್ ಎಂದರೆ ಅದನ್ನೇ ಪುನರುಚ್ಚರಿಸುವ ಕೆಲಸ ಮಾಡಬಾರದು’ ಎಂದು ಕುಟುಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ</strong>: ‘ಸಂಪೂರ್ಣ ಅಧ್ಯಯನ ಮಾಡದೆ ಬಜೆಟ್ ಕುರಿತು ಹೇಳಿಕೆ ನೀಡಿರುವ ಆರ್. ಅಶೋಕ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಯೋಗ್ಯರಲ್ಲ’ ಎಂದು ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ವಾಗ್ದಾಳಿ ನಡೆಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಗರಿಗೆ ಅಧ್ಯಯನದ ಕೊರತೆಯಿದೆ. 197 ಪುಟಗಳ ಬಜೆಟ್ ಪ್ರತಿಯನ್ನು ಸಂಪೂರ್ಣವಾಗಿ ಪರಾಮರ್ಶಿಸದೆ ಹೇಳಿಕೆ ನೀಡುತ್ತಿದ್ದಾರೆ’ ಎಂದು ಟೀಕಿಸಿದರು.</p>.<p>‘ಹಿಂದುಳಿದವರು, ದಲಿತರು, ಅಲ್ಪ ಸಂಖ್ಯಾತರು ಸೇರಿದಂತೆ ಎಲ್ಲಾ ವರ್ಗದವರನ್ನು ಮೇಲೆತ್ತುವ ಗುರಿಯೊಂದಿಗೆ ಬಜೆಟ್ ಮಂಡಿಸಲಾಗಿದೆ. ಅಧ್ಯಯನದ ಕೊರತೆಯಿಂದ ವಿಪಕ್ಷ ನಾಯಕ ಹಲಾಲ್ ಬಜೆಟ್ ಎಂದು ಆರೋಪಿಸುತ್ತಿದ್ದಾರೆ. ಬಿಜೆಪಿಗರಿಗೆ ಜನರ ಭಾವನೆಯನ್ನು ಕೆರಳಿಸುವುದೇ ಕಾಯಕವಾಗಿದೆ’ ಎಂದು ಆಕ್ರೋಶ ವ್ಯಕ್ತ ಪಡಿಸಿದರು.</p>.<p>‘ಬಜೆಟ್ನಲ್ಲಿ ನ್ಯೂನತೆಗಳಿದ್ದರೆ ವಿಪಕ್ಷ ನಾಯಕ ಸ್ಥಾನದಲ್ಲಿರುವವರು ಅದನ್ನು ಸದನ ಮುಂದೆ ಇಟ್ಟು ಚರ್ಚಿಸಬೇಕು. ಯಾರೋ ಪಕ್ಕದಲ್ಲಿದ್ದವರು ಬೋಗಸ್ ಬಜೆಟ್ ಎಂದರೆ ಅದನ್ನೇ ಪುನರುಚ್ಚರಿಸುವ ಕೆಲಸ ಮಾಡಬಾರದು’ ಎಂದು ಕುಟುಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>