<p><strong>ಚಿತ್ರದುರ್ಗ</strong>: ಬೆಂಗಳೂರಿನ ಯಲಹಂಕ ಸೇತುವೆಗೆ ವೀರ ಸಾವರ್ಕರ್ ಹೆಸರು ಇಟ್ಟಿರುವುದರಲ್ಲಿ ಯಾವುದೇ ತಪ್ಪಿಲ್ಲ. ಕಾಂಗ್ರೆಸ್ ಹಾಗೂ ಜೆಡಿಎಸ್ ಬೆದರಿಕೆಗಳಿಗೆ ಬಿಜೆಪಿ ಬಗ್ಗುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿರುಗೇಟು ನೀಡಿದರು.</p>.<p>ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಜೆಡಿಎಸ್ ಶಾಸಕ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.</p>.<p>‘ಸಾವರ್ಕರ್ ಹೆಸರಲ್ಲೇ ವೀರ ಎಂಬ ವಿಶೇಷಣವಿದೆ. ಬ್ರಿಟಿಷರ ವಿರುದ್ಧ ಹೋರಾಟ ನಡೆಸಿ ಜೈಲು ಶಿಕ್ಷೆ ಅನುಭವಿಸಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ತರಲು ಶ್ರಮಿಸಿದ್ದಾರೆ. ಮಹಾತ್ಮ ಗಾಂಧೀಜಿ, ಬಿ.ಆರ್.ಅಂಬೇಡ್ಕರ್ ಅವರ ಹೆಸರನ್ನು ಹಲವು ಕಡೆ ಇಡಲಾಗಿದೆ. ಸಾವರ್ಕರ್ ಹೆಸರು ಇಡುವುದರಲ್ಲಿ ತಪ್ಪೇನಿದೆ’ ಎಂದು ಪ್ರಶ್ನಿಸಿದರು.</p>.<p>‘ಹಿಂದುತ್ವ ಪ್ರತಿಪಾದನೆ ಮಾಡಿದ ಕಾರಣಕ್ಕೆ ಸಾವರ್ಕರ್ ಅವರನ್ನು ಕಾಂಗ್ರೆಸ್ ವಿರೋಧಿಸುತ್ತಿದೆ. ನಕಲಿ ಗಾಂಧಿ ಕುಟುಂಬದ ವಂಶಪಾರಂಪರ್ಯ ರಾಜಕಾರಣದ ಮನಸ್ಥಿತಿಯಿಂದ ಕಾಂಗ್ರೆಸ್ ನಾಯಕರು ಹೊರಬರುವ ಅಗತ್ಯವಿದೆ. ಸ್ವಾತಂತ್ರ್ಯ ಚಳವಳಿಗೆ ಹೋರಾಡಿದವರಿಗೆ ಗೌರವ ಕೊಡುವುದನ್ನು ಕಲಿತುಕೊಳ್ಳಬೇಕಿದೆ’ ಎಂದು ಕುಟುಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ಬೆಂಗಳೂರಿನ ಯಲಹಂಕ ಸೇತುವೆಗೆ ವೀರ ಸಾವರ್ಕರ್ ಹೆಸರು ಇಟ್ಟಿರುವುದರಲ್ಲಿ ಯಾವುದೇ ತಪ್ಪಿಲ್ಲ. ಕಾಂಗ್ರೆಸ್ ಹಾಗೂ ಜೆಡಿಎಸ್ ಬೆದರಿಕೆಗಳಿಗೆ ಬಿಜೆಪಿ ಬಗ್ಗುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿರುಗೇಟು ನೀಡಿದರು.</p>.<p>ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಜೆಡಿಎಸ್ ಶಾಸಕ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.</p>.<p>‘ಸಾವರ್ಕರ್ ಹೆಸರಲ್ಲೇ ವೀರ ಎಂಬ ವಿಶೇಷಣವಿದೆ. ಬ್ರಿಟಿಷರ ವಿರುದ್ಧ ಹೋರಾಟ ನಡೆಸಿ ಜೈಲು ಶಿಕ್ಷೆ ಅನುಭವಿಸಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ತರಲು ಶ್ರಮಿಸಿದ್ದಾರೆ. ಮಹಾತ್ಮ ಗಾಂಧೀಜಿ, ಬಿ.ಆರ್.ಅಂಬೇಡ್ಕರ್ ಅವರ ಹೆಸರನ್ನು ಹಲವು ಕಡೆ ಇಡಲಾಗಿದೆ. ಸಾವರ್ಕರ್ ಹೆಸರು ಇಡುವುದರಲ್ಲಿ ತಪ್ಪೇನಿದೆ’ ಎಂದು ಪ್ರಶ್ನಿಸಿದರು.</p>.<p>‘ಹಿಂದುತ್ವ ಪ್ರತಿಪಾದನೆ ಮಾಡಿದ ಕಾರಣಕ್ಕೆ ಸಾವರ್ಕರ್ ಅವರನ್ನು ಕಾಂಗ್ರೆಸ್ ವಿರೋಧಿಸುತ್ತಿದೆ. ನಕಲಿ ಗಾಂಧಿ ಕುಟುಂಬದ ವಂಶಪಾರಂಪರ್ಯ ರಾಜಕಾರಣದ ಮನಸ್ಥಿತಿಯಿಂದ ಕಾಂಗ್ರೆಸ್ ನಾಯಕರು ಹೊರಬರುವ ಅಗತ್ಯವಿದೆ. ಸ್ವಾತಂತ್ರ್ಯ ಚಳವಳಿಗೆ ಹೋರಾಡಿದವರಿಗೆ ಗೌರವ ಕೊಡುವುದನ್ನು ಕಲಿತುಕೊಳ್ಳಬೇಕಿದೆ’ ಎಂದು ಕುಟುಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>