‘ಚಲುವರಾಯಸ್ವಾಮಿ ಅವರೇ, ಮಠಗಳು ಅಂದರೆ ಅದು ಸಮಾಜಕ್ಕೆ ಸನ್ಮಾರ್ಗ ತೋರುವ ಅಧ್ಯಾತ್ಮದ ಕೇಂದ್ರಗಳು. ಬಡ ಬಗ್ಗರಿಗೆ ಅನ್ನ, ಅಕ್ಷರ, ಆಶ್ರಯ, ಆರೋಗ್ಯ ದಾಸೋಹ ನೀಡುವ ಸೇವಾ ಕೇಂದ್ರಗಳು. ಮಸೀದಿಗಳು, ಮದರಸಾಗಳು, ಮೌಲ್ವಿಗಳನ್ನು ಬಳಸಿಕೊಂಡು ವೋಟ್ ಬ್ಯಾಂಕ್ ಗ್ಯಾರಂಟಿ ಮಾಡಿಕೊಳ್ಳುವ ರಾಜಕಾರಣಕ್ಕೆ ಒಗ್ಗಿಕೊಂಡಿರುವ ನಿಮ್ಮ ಕಾಂಗ್ರೆಸ್ ಪಕ್ಷದ ಕಾಮಾಲೆ ಕಣ್ಣಿಗೆ ಎಲ್ಲವೂ ಹಳದಿಯಾಗಿಯೇ ಕಾಣುವುದು ಸಹಜ’ ಎಂದು ಕುಟುಕಿದ್ದಾರೆ.