<p><strong>ಬೆಂಗಳೂರು</strong>: ‘ಡಿ.ಕೆ.ಶಿವಕುಮಾರ್ ಮತ್ತು ಅವರ ಬಣದ ಶಾಸಕರ ಚಟುವಟಿಕೆಗಳ ಕಣ್ಗಾವಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಪ್ತಚರ ವಿಭಾಗಕ್ಕೆ ಸೂಚನೆ ನೀಡಿದ್ದಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆರೋಪಿಸಿದರು.</p><p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕೃತ್ಯಕ್ಕಾಗಿ ಎಸ್ಪಿ ನೇತೃತ್ವದಲ್ಲಿ ಅನಧಿಕೃತವಾಗಿ ತಂಡವೊಂದನ್ನು ರಚಿಸಿದ್ದಾರೆ ಎಂದೂ ದೂರಿದರು.</p><p>‘ಸಾಮಾನ್ಯವಾಗಿ ಗುಪ್ತಚರ ವಿಭಾಗವನ್ನು ಮುಖ್ಯಮಂತ್ರಿಯವರೇ ಇಟ್ಟುಕೊಳ್ಳುತ್ತಾರೆ. ಅದನ್ನು ರಾಜ್ಯದ ಹಿತಕ್ಕಾಗಿ ಬಳಸಿಕೊಳ್ಳಬೇಕು. ಆದರೆ ಇಲ್ಲಿ ತಮ್ಮ ಕುರ್ಚಿ ಉಳಿಸಿಕೊಳ್ಳಲು ವಿರೋಧಿ ಬಣದ ಶಾಸಕರ ಚಟುವಟಿಕೆಗಳ ಮಾಹಿತಿ ಕಲೆ ಹಾಕಲು ಬಳಸುತ್ತಿದ್ದಾರೆ’ ಎಂದು ಹೇಳಿದರು.</p><p>‘ಶಿವಕುಮಾರ್ ಬಣದ ಶಾಸಕರು ಎಲ್ಲಿ ಊಟಕ್ಕೆ ಹೋಗುತ್ತಾರೆ, ಏನು ಮಾಡುತ್ತಾರೆ ಎಂಬುದರ ಮೇಲೆ ಕಣ್ಣಿಡುವುದಕ್ಕೆ ಗುಪ್ತಚರ ವಿಭಾಗ ಸೀಮಿತವಾಗಿದೆ. ಈ ವಿಭಾಗ ಡ್ರಗ್ಸ್ ಫ್ಯಾಕ್ಟರಿಗಳ ಮೇಲೆ ಕಣ್ಣಿಟ್ಟಿಲ್ಲ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಕೋಮು ಸಂಘರ್ಷ ಹೆಚ್ಚಾಗುತ್ತಿದೆ. ಅದರ ಮಾಹಿತಿ ಸಂಗ್ರಹಿಸುತ್ತಿಲ್ಲ. ಸರ್ಕಾರಕ್ಕೆ ಇವ್ಯಾವುದೂ ಆದ್ಯತೆ ಆಗಿಲ್ಲ. ರಾಜಕೀಯ ಪ್ರತಿಸ್ಪರ್ಧಿಗಳನ್ನು ಮೂಲೆಗುಂಪು ಮಾಡುವುದು ಸಿದ್ದರಾಮಯ್ಯ ಅವರ ಆದ್ಯತೆ’ ಎಂದು ಅಶೋಕ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.Karnataka Politics: ಎಲ್ಲ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು–ಎಚ್ಡಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಡಿ.ಕೆ.ಶಿವಕುಮಾರ್ ಮತ್ತು ಅವರ ಬಣದ ಶಾಸಕರ ಚಟುವಟಿಕೆಗಳ ಕಣ್ಗಾವಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಪ್ತಚರ ವಿಭಾಗಕ್ಕೆ ಸೂಚನೆ ನೀಡಿದ್ದಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆರೋಪಿಸಿದರು.</p><p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕೃತ್ಯಕ್ಕಾಗಿ ಎಸ್ಪಿ ನೇತೃತ್ವದಲ್ಲಿ ಅನಧಿಕೃತವಾಗಿ ತಂಡವೊಂದನ್ನು ರಚಿಸಿದ್ದಾರೆ ಎಂದೂ ದೂರಿದರು.</p><p>‘ಸಾಮಾನ್ಯವಾಗಿ ಗುಪ್ತಚರ ವಿಭಾಗವನ್ನು ಮುಖ್ಯಮಂತ್ರಿಯವರೇ ಇಟ್ಟುಕೊಳ್ಳುತ್ತಾರೆ. ಅದನ್ನು ರಾಜ್ಯದ ಹಿತಕ್ಕಾಗಿ ಬಳಸಿಕೊಳ್ಳಬೇಕು. ಆದರೆ ಇಲ್ಲಿ ತಮ್ಮ ಕುರ್ಚಿ ಉಳಿಸಿಕೊಳ್ಳಲು ವಿರೋಧಿ ಬಣದ ಶಾಸಕರ ಚಟುವಟಿಕೆಗಳ ಮಾಹಿತಿ ಕಲೆ ಹಾಕಲು ಬಳಸುತ್ತಿದ್ದಾರೆ’ ಎಂದು ಹೇಳಿದರು.</p><p>‘ಶಿವಕುಮಾರ್ ಬಣದ ಶಾಸಕರು ಎಲ್ಲಿ ಊಟಕ್ಕೆ ಹೋಗುತ್ತಾರೆ, ಏನು ಮಾಡುತ್ತಾರೆ ಎಂಬುದರ ಮೇಲೆ ಕಣ್ಣಿಡುವುದಕ್ಕೆ ಗುಪ್ತಚರ ವಿಭಾಗ ಸೀಮಿತವಾಗಿದೆ. ಈ ವಿಭಾಗ ಡ್ರಗ್ಸ್ ಫ್ಯಾಕ್ಟರಿಗಳ ಮೇಲೆ ಕಣ್ಣಿಟ್ಟಿಲ್ಲ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಕೋಮು ಸಂಘರ್ಷ ಹೆಚ್ಚಾಗುತ್ತಿದೆ. ಅದರ ಮಾಹಿತಿ ಸಂಗ್ರಹಿಸುತ್ತಿಲ್ಲ. ಸರ್ಕಾರಕ್ಕೆ ಇವ್ಯಾವುದೂ ಆದ್ಯತೆ ಆಗಿಲ್ಲ. ರಾಜಕೀಯ ಪ್ರತಿಸ್ಪರ್ಧಿಗಳನ್ನು ಮೂಲೆಗುಂಪು ಮಾಡುವುದು ಸಿದ್ದರಾಮಯ್ಯ ಅವರ ಆದ್ಯತೆ’ ಎಂದು ಅಶೋಕ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p>.Karnataka Politics: ಎಲ್ಲ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು–ಎಚ್ಡಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>