<p><strong>ಮೈಸೂರು:</strong> ‘ಅಧಿಕಾರ ಹಸ್ತಾಂತರ ವಿಚಾರದಲ್ಲಿ ಉಂಟಾಗಿರುವ ಗೊಂದಲದ ಬಗ್ಗೆ ಇತಿಶ್ರೀ ಹಾಡುವ ಯೋಗ್ಯತೆ ಕಾಂಗ್ರೆಸ್ ಹೈಕಮಾಂಡ್ಗೆ ಇಲ್ಲ. ಹೀಗೆಯೇ ಮುಂದೂಡುವ ಮನಸ್ಥಿತಿಯಲ್ಲಿದೆ. ಸಿದ್ದರಾಮಯ್ಯ ಯಾವಾಗಲೂ ಸೀಟ್ ಭದ್ರಪಡಿಸಿಕೊಂಡೇ ಇರುತ್ತಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಟೀಕಿಸಿದರು.</p>.ನಾವು ಹೋರಾಟ ಮಾಡಿದ್ದರಿಂದ ಯುವಜನರಿಗೆ ಉದ್ಯೋಗ ಸಿಗುತ್ತಿದೆ: ಆರ್. ಅಶೋಕ.<p>ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕುರ್ಚಿಗೆ ಫೆವಿಕಲ್ ಹಾಕಿ ಅಂಟಿಸಿಕೊಳ್ಳುವ ವಿದ್ಯೆ ಸಿದ್ದರಾಮಯ್ಯ ಅವರಿಗೆ ಚೆನ್ನಾಗಿ ಗೊತ್ತಿದೆ. ಡಿ.ಕೆ. ಶಿವಕುಮಾರ್ಗೆ ಇದೆಲ್ಲವೂ ಗೊತ್ತಿಲ್ಲ. ಹೊಡೆದು ಕಿತ್ತುಕೊಳ್ಳುವ ಕಾಲ ಇದಲ್ಲ, ತಲೆ ಬಳಸಬೇಕಾದ ಕಾಲವಿದು’ ಎಂದರು.</p><p>‘ಸಿದ್ದರಾಮಯ್ಯ ಐದು ವರ್ಷದವರೆಗೂ ಕುರ್ಚಿ ಬಿಡುವುದಿಲ್ಲ. ಅದಂತೂ ಪಕ್ಕಾ’ ಎಂದು ಹೇಳಿದರು.</p><p>‘ರಾಜ್ಯ ಸರ್ಕಾರ ಜನರ ಪಾಲಿಗೆ ಸತ್ತು ಹೋಗಿದೆ. ಆ ಹೆಣವನ್ನು ಯಾರು ಯಾವ ಭಾಗದಿಂದಾದರೂ ಹೊರಲಿ, ಅದು ನಮಗೆ ಬೇಕಿಲ್ಲ’ ಎಂದರು.</p>.ಸಂಪುಟ ಪುನರ್ ರಚನೆ | ಹೈಕಮಾಂಡ್ಗೆ ಬರೆದ ಪತ್ರ ಹಳೆಯದು: ಶಾಸಕ ಅಶೋಕ ಮನಗೂಳಿ .<p>‘ಗ್ಯಾರಂಟಿ ಹೊರೆ ಆಗುತ್ತಿದೆ ಎಂದು ಈಗ ಹೇಳುತ್ತಿರುವ ಅವರಿಗೆ ಆಗ ಜ್ಞಾನವಿರಲಿಲ್ಲವೇ? ಗ್ಯಾರಂಟಿ ಕಿತ್ತು ಹಾಕಲು ನಡೆಸುತ್ತಿರುವ ಹುನ್ನಾರವಿದು. ಯುವನಿಧಿ ಈಗಾಗಲೇ ಗೋವಿಂದ ಆಗಿ ಹೋಗಿದೆ. ಬಸ್ಗಳೆಲ್ಲಾ ನಿಂತು ಹೋಗುತ್ತಿವೆ. ಆರು ತಿಂಗಳಲ್ಲಿ ಸಾರಿಗೆ ನೌಕರರು ಮುಷ್ಕರ ನಡೆಸಲಿದ್ದಾರೆ’ ಎಂದು ದೂರಿದರು.</p><p>‘ದೇವಸ್ಥಾನಗಳನ್ನು ಸುತ್ತುತ್ತಿರುವ ಡಿ.ಕೆ. ಶಿವಕುಮಾರ್ ನಾಮದ ಮೇಲೆ ನಾಮ ಹಾಕಿಕೊಳ್ಳುತ್ತಿದ್ದಾರೆ. ಒಪ್ಪಂದ ಆಗಿದೆ ಎನ್ನುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ ಆ ಬಗ್ಗೆ ಒಮ್ಮೆಯೂ ಹೇಳಿಯೇ ಇಲ್ಲ. ಒಪ್ಪಂದ ಆಗಿದೆಯೋ ಇಲ್ಲವೋ ತಿಳಿಸಿಬಿಡಿ. ಕಿತ್ತಾಡುತ್ತಾ ಗೊಂದಲ ಸೃಷ್ಟಿಸುತ್ತಿದ್ದೀರೇಕೆ?’ ಎಂದರು. ‘ಈ ಬೆಳವಣಿಗೆಯನ್ನು ರಾಜ್ಯದ ಜನರೊಂದಿಗೆ ನಾವೂ ಎಂಜಾಯ್ ಮಾಡುತ್ತಿದ್ದೇವೆ’ ಎಂದು ಪ್ರತಿಕ್ರಿಯಿಸಿದರು.</p>.‘ಟ್ಯಾಂಕರ್ ಮಾಫಿಯಾ’ಕ್ಕೆ ಸರ್ಕಾರ ನೆರವು: ಅಶೋಕ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಅಧಿಕಾರ ಹಸ್ತಾಂತರ ವಿಚಾರದಲ್ಲಿ ಉಂಟಾಗಿರುವ ಗೊಂದಲದ ಬಗ್ಗೆ ಇತಿಶ್ರೀ ಹಾಡುವ ಯೋಗ್ಯತೆ ಕಾಂಗ್ರೆಸ್ ಹೈಕಮಾಂಡ್ಗೆ ಇಲ್ಲ. ಹೀಗೆಯೇ ಮುಂದೂಡುವ ಮನಸ್ಥಿತಿಯಲ್ಲಿದೆ. ಸಿದ್ದರಾಮಯ್ಯ ಯಾವಾಗಲೂ ಸೀಟ್ ಭದ್ರಪಡಿಸಿಕೊಂಡೇ ಇರುತ್ತಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಟೀಕಿಸಿದರು.</p>.ನಾವು ಹೋರಾಟ ಮಾಡಿದ್ದರಿಂದ ಯುವಜನರಿಗೆ ಉದ್ಯೋಗ ಸಿಗುತ್ತಿದೆ: ಆರ್. ಅಶೋಕ.<p>ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕುರ್ಚಿಗೆ ಫೆವಿಕಲ್ ಹಾಕಿ ಅಂಟಿಸಿಕೊಳ್ಳುವ ವಿದ್ಯೆ ಸಿದ್ದರಾಮಯ್ಯ ಅವರಿಗೆ ಚೆನ್ನಾಗಿ ಗೊತ್ತಿದೆ. ಡಿ.ಕೆ. ಶಿವಕುಮಾರ್ಗೆ ಇದೆಲ್ಲವೂ ಗೊತ್ತಿಲ್ಲ. ಹೊಡೆದು ಕಿತ್ತುಕೊಳ್ಳುವ ಕಾಲ ಇದಲ್ಲ, ತಲೆ ಬಳಸಬೇಕಾದ ಕಾಲವಿದು’ ಎಂದರು.</p><p>‘ಸಿದ್ದರಾಮಯ್ಯ ಐದು ವರ್ಷದವರೆಗೂ ಕುರ್ಚಿ ಬಿಡುವುದಿಲ್ಲ. ಅದಂತೂ ಪಕ್ಕಾ’ ಎಂದು ಹೇಳಿದರು.</p><p>‘ರಾಜ್ಯ ಸರ್ಕಾರ ಜನರ ಪಾಲಿಗೆ ಸತ್ತು ಹೋಗಿದೆ. ಆ ಹೆಣವನ್ನು ಯಾರು ಯಾವ ಭಾಗದಿಂದಾದರೂ ಹೊರಲಿ, ಅದು ನಮಗೆ ಬೇಕಿಲ್ಲ’ ಎಂದರು.</p>.ಸಂಪುಟ ಪುನರ್ ರಚನೆ | ಹೈಕಮಾಂಡ್ಗೆ ಬರೆದ ಪತ್ರ ಹಳೆಯದು: ಶಾಸಕ ಅಶೋಕ ಮನಗೂಳಿ .<p>‘ಗ್ಯಾರಂಟಿ ಹೊರೆ ಆಗುತ್ತಿದೆ ಎಂದು ಈಗ ಹೇಳುತ್ತಿರುವ ಅವರಿಗೆ ಆಗ ಜ್ಞಾನವಿರಲಿಲ್ಲವೇ? ಗ್ಯಾರಂಟಿ ಕಿತ್ತು ಹಾಕಲು ನಡೆಸುತ್ತಿರುವ ಹುನ್ನಾರವಿದು. ಯುವನಿಧಿ ಈಗಾಗಲೇ ಗೋವಿಂದ ಆಗಿ ಹೋಗಿದೆ. ಬಸ್ಗಳೆಲ್ಲಾ ನಿಂತು ಹೋಗುತ್ತಿವೆ. ಆರು ತಿಂಗಳಲ್ಲಿ ಸಾರಿಗೆ ನೌಕರರು ಮುಷ್ಕರ ನಡೆಸಲಿದ್ದಾರೆ’ ಎಂದು ದೂರಿದರು.</p><p>‘ದೇವಸ್ಥಾನಗಳನ್ನು ಸುತ್ತುತ್ತಿರುವ ಡಿ.ಕೆ. ಶಿವಕುಮಾರ್ ನಾಮದ ಮೇಲೆ ನಾಮ ಹಾಕಿಕೊಳ್ಳುತ್ತಿದ್ದಾರೆ. ಒಪ್ಪಂದ ಆಗಿದೆ ಎನ್ನುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ ಆ ಬಗ್ಗೆ ಒಮ್ಮೆಯೂ ಹೇಳಿಯೇ ಇಲ್ಲ. ಒಪ್ಪಂದ ಆಗಿದೆಯೋ ಇಲ್ಲವೋ ತಿಳಿಸಿಬಿಡಿ. ಕಿತ್ತಾಡುತ್ತಾ ಗೊಂದಲ ಸೃಷ್ಟಿಸುತ್ತಿದ್ದೀರೇಕೆ?’ ಎಂದರು. ‘ಈ ಬೆಳವಣಿಗೆಯನ್ನು ರಾಜ್ಯದ ಜನರೊಂದಿಗೆ ನಾವೂ ಎಂಜಾಯ್ ಮಾಡುತ್ತಿದ್ದೇವೆ’ ಎಂದು ಪ್ರತಿಕ್ರಿಯಿಸಿದರು.</p>.‘ಟ್ಯಾಂಕರ್ ಮಾಫಿಯಾ’ಕ್ಕೆ ಸರ್ಕಾರ ನೆರವು: ಅಶೋಕ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>