‘ನಾಡಿನ ಸಂಸ್ಕೃತಿ ಎತ್ತಿಹಿಡಿಯಬೇಕಾದ ಅವರು ತಮ್ಮ ಸಂಸ್ಕೃತಿ ತೋರಿಸುತ್ತಿದ್ದಾರೆ. ಅವರನ್ನು ಸಮರ್ಥಿಸುವವರು ಹಳ್ಳಿ ಭಾಷೆ ಬಳಕೆ ಎಂದು ಹೇಳುತ್ತಿದ್ದಾರೆ. ಇವರ ‘ಗುರು’ ಸಿದ್ದರಾಮಯ್ಯ ಪ್ರಧಾನಿ ಮೋದಿಯವರನ್ನು ಏಕವಚನದಲ್ಲಿ ‘ಅವನು– ಇವನು’ ಎನ್ನುತ್ತಾ ಮಾತನಾಡುತ್ತಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಏಕವಚನದಲ್ಲಿ ಕರೆಯುತ್ತಾರೆ. ರಾಜ್ಯದಲ್ಲಿ ಸಂಸ್ಕಾರವೇ ಇಲ್ಲದ ಸರ್ಕಾರವಿದೆ’ ಎಂದು ಅಶೋಕ ಕಿಡಿಕಾರಿದರು.