<p><strong>ಬೆಂಗಳೂರು:</strong> ‘ಬಿಬಿಎಂಪಿ ಮೂಲಕ ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಯೋಜನೆಯ ಹಿಂದೆ ಇರುವುದು ತೆರಿಗೆ ಹಣ ಲೂಟಿ ಹೊಡೆಯುವ ಉದ್ದೇಶ ಮಾತ್ರ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಟೀಕಿಸಿದರು.</p>.<p>ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬೀದಿನಾಯಿಗಳ ಉಪಟಳದಿಂದ ಮಕ್ಕಳಿಗೆ ತೊಂದರೆಯಾಗುತ್ತಿದೆ. ನಾಯಿಗಳ ಸಂಖ್ಯೆ ಕಡಿಮೆ ಮಾಡಬೇಕು ಎಂಬ ಉದ್ದೇಶದ ಯೋಜನೆ ಬಿಬಿಎಂಪಿಯಲ್ಲಿದೆ. ಅದನ್ನು ಮೊದಲು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲಿ’ ಎಂದರು.</p>.<p>‘ಬೀದಿನಾಯಿಗಳ ಬಗ್ಗೆ ಇವರಿಗೆ ಕಾಳಜಿ ಪ್ರಾಮಾಣಿಕವೇ ಆಗಿದ್ದರೆ, ಅವುಗಳಿಗಾಗಿ ಒಂದು ಆಸ್ಪತ್ರೆ ನಿರ್ಮಿಸಬಹುದಿತ್ತು. ಬೀದಿ ಬದಿಯಲ್ಲಿ ಬಿದ್ದಿರುವ ನಾಯಿ ಅಥವಾ ಅಪಘಾತಕ್ಕೊಳಗಾದ ನಾಯಿಗಳನ್ನು ತಂದು ಚಿಕಿತ್ಸೆ ನೀಡಬಹುದಿತ್ತು. ಅದನ್ನು ಬಿಟ್ಟು, ಬಿರಿಯಾನಿ ಹಾಕುವ ಅಗತ್ಯವೇನಿದೆ’ ಎಂದು ಪ್ರಶ್ನಿಸಿದರು.</p>.<p>‘ರಸ್ತೆಗಳಲ್ಲಿ ಗುಂಡಿಗಳು ಹೆಚ್ಚಾಗಿವೆ. ಉದ್ಯಾನಗಳ ನಿರ್ವಹಣೆ ಆಗುತ್ತಿಲ್ಲ. ಬಿಬಿಎಂಪಿ ಆಸ್ಪತ್ರೆಗಳಲ್ಲಿ ಸಿಬ್ಬಂದಿಗೆ ಸಂಬಳ ಕೊಡಲು ಹಣವಿಲ್ಲ. ಶಾಲೆಗಳ ಶಿಕ್ಷಕರಿಗೆ ಸಂಬಳ ನೀಡುತ್ತಿಲ್ಲ. ಯಾವುದಕ್ಕೂ ಹಣ ಇಲ್ಲ ಎಂದಾಗಿರುವಾಗ, ಇಂತಹ ದುಂದುವೆಚ್ಚದ ಯೋಜನೆ ಅಗತ್ಯವಿಲ್ಲ’ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<h2> ‘ಮಕ್ಕಳಿಗೆ ₹12.45 ನಾಯಿಗಳಿಗೆ ₹22’ </h2><p>ರಾಜ್ಯ ಸರ್ಕಾರವು ಪೌಷ್ಟಿಕ ಆಹಾರ ಬಿಸಿಯೂಟ ಯೋಜನೆ ಅಡಿಯಲ್ಲಿ ಪ್ರತಿ ಮಗುವಿಗೆ ₹12.45 ವೆಚ್ಚ ಮಾಡುತ್ತಿದೆ. ಆದರೆ ಪ್ರತಿ ಬೀದಿ ನಾಯಿಗೆ ಬಿರಿಯಾನಿ ನೀಡಲು ₹22 ವೆಚ್ಚ ಮಾಡಲು ಮುಂದಾಗಿದೆ. ಬಡಮಕ್ಕಳಿಗೆ ಅನ್ಯಾಯ ಮಾಡುತ್ತಿದೆ’ ಎಂದು ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ಅಸಮಾಧಾನ ವ್ಯಕ್ತಪಡಿಸಿದರು. ‘ಬಿಬಿಎಂಪಿಯು 2023ರಲ್ಲಿ ನಡೆಸಿದ್ದ ಸಮೀಕ್ಷೆ ಪ್ರಕಾರ ನಗರದಲ್ಲಿ ಸುಮಾರು 4 ಲಕ್ಷ ಬೀದಿ ನಾಯಿಗಳಿವೆ. ಆದರೆ ಈಗ 4000 ನಾಯಿಗಳಿಗಷ್ಟೇ ಕೋಳಿ ಬಿರಿಯಾನಿ ನೀಡಲು ಸರ್ಕಾರ ಯೋಜನೆ ರೂಪಿಸಿ ಉಳಿದ ಲಕ್ಷಾಂತರ ನಾಯಿಗಳನ್ನು ಕಡೆಗಣಿಸಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಬಿಬಿಎಂಪಿ ಮೂಲಕ ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಯೋಜನೆಯ ಹಿಂದೆ ಇರುವುದು ತೆರಿಗೆ ಹಣ ಲೂಟಿ ಹೊಡೆಯುವ ಉದ್ದೇಶ ಮಾತ್ರ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಟೀಕಿಸಿದರು.</p>.<p>ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬೀದಿನಾಯಿಗಳ ಉಪಟಳದಿಂದ ಮಕ್ಕಳಿಗೆ ತೊಂದರೆಯಾಗುತ್ತಿದೆ. ನಾಯಿಗಳ ಸಂಖ್ಯೆ ಕಡಿಮೆ ಮಾಡಬೇಕು ಎಂಬ ಉದ್ದೇಶದ ಯೋಜನೆ ಬಿಬಿಎಂಪಿಯಲ್ಲಿದೆ. ಅದನ್ನು ಮೊದಲು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲಿ’ ಎಂದರು.</p>.<p>‘ಬೀದಿನಾಯಿಗಳ ಬಗ್ಗೆ ಇವರಿಗೆ ಕಾಳಜಿ ಪ್ರಾಮಾಣಿಕವೇ ಆಗಿದ್ದರೆ, ಅವುಗಳಿಗಾಗಿ ಒಂದು ಆಸ್ಪತ್ರೆ ನಿರ್ಮಿಸಬಹುದಿತ್ತು. ಬೀದಿ ಬದಿಯಲ್ಲಿ ಬಿದ್ದಿರುವ ನಾಯಿ ಅಥವಾ ಅಪಘಾತಕ್ಕೊಳಗಾದ ನಾಯಿಗಳನ್ನು ತಂದು ಚಿಕಿತ್ಸೆ ನೀಡಬಹುದಿತ್ತು. ಅದನ್ನು ಬಿಟ್ಟು, ಬಿರಿಯಾನಿ ಹಾಕುವ ಅಗತ್ಯವೇನಿದೆ’ ಎಂದು ಪ್ರಶ್ನಿಸಿದರು.</p>.<p>‘ರಸ್ತೆಗಳಲ್ಲಿ ಗುಂಡಿಗಳು ಹೆಚ್ಚಾಗಿವೆ. ಉದ್ಯಾನಗಳ ನಿರ್ವಹಣೆ ಆಗುತ್ತಿಲ್ಲ. ಬಿಬಿಎಂಪಿ ಆಸ್ಪತ್ರೆಗಳಲ್ಲಿ ಸಿಬ್ಬಂದಿಗೆ ಸಂಬಳ ಕೊಡಲು ಹಣವಿಲ್ಲ. ಶಾಲೆಗಳ ಶಿಕ್ಷಕರಿಗೆ ಸಂಬಳ ನೀಡುತ್ತಿಲ್ಲ. ಯಾವುದಕ್ಕೂ ಹಣ ಇಲ್ಲ ಎಂದಾಗಿರುವಾಗ, ಇಂತಹ ದುಂದುವೆಚ್ಚದ ಯೋಜನೆ ಅಗತ್ಯವಿಲ್ಲ’ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<h2> ‘ಮಕ್ಕಳಿಗೆ ₹12.45 ನಾಯಿಗಳಿಗೆ ₹22’ </h2><p>ರಾಜ್ಯ ಸರ್ಕಾರವು ಪೌಷ್ಟಿಕ ಆಹಾರ ಬಿಸಿಯೂಟ ಯೋಜನೆ ಅಡಿಯಲ್ಲಿ ಪ್ರತಿ ಮಗುವಿಗೆ ₹12.45 ವೆಚ್ಚ ಮಾಡುತ್ತಿದೆ. ಆದರೆ ಪ್ರತಿ ಬೀದಿ ನಾಯಿಗೆ ಬಿರಿಯಾನಿ ನೀಡಲು ₹22 ವೆಚ್ಚ ಮಾಡಲು ಮುಂದಾಗಿದೆ. ಬಡಮಕ್ಕಳಿಗೆ ಅನ್ಯಾಯ ಮಾಡುತ್ತಿದೆ’ ಎಂದು ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ಅಸಮಾಧಾನ ವ್ಯಕ್ತಪಡಿಸಿದರು. ‘ಬಿಬಿಎಂಪಿಯು 2023ರಲ್ಲಿ ನಡೆಸಿದ್ದ ಸಮೀಕ್ಷೆ ಪ್ರಕಾರ ನಗರದಲ್ಲಿ ಸುಮಾರು 4 ಲಕ್ಷ ಬೀದಿ ನಾಯಿಗಳಿವೆ. ಆದರೆ ಈಗ 4000 ನಾಯಿಗಳಿಗಷ್ಟೇ ಕೋಳಿ ಬಿರಿಯಾನಿ ನೀಡಲು ಸರ್ಕಾರ ಯೋಜನೆ ರೂಪಿಸಿ ಉಳಿದ ಲಕ್ಷಾಂತರ ನಾಯಿಗಳನ್ನು ಕಡೆಗಣಿಸಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>