ಶಾಸಕರು ದಂಗೆ ಎದ್ದಿದ್ದಾರೆ ಎಂದರೆ ಆ ರೀತಿ ಏನೂ ಇಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದರು. ಆದರೆ, ಬಿ.ಆರ್.ಪಾಟೀಲ ಅವರು ಸರ್ಕಾರದ ವಿರುದ್ಧ ಕೆಂಡ ಕಾರಿ ಎರಡನೇ ಬಾರಿ ಪತ್ರ ಬರೆದಿದ್ದಾರೆ. ಅಧಿವೇಶನಕ್ಕೆ ಬರುವುದಿಲ್ಲ, ರಾಜೀನಾಮೆ ಕೊಡುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು.